ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ  ರೇಣುಕಾಚಾರ್ಯ ದಂಪತಿ -Vishwanews24

Featured, ರಾಜ್ಯ ನ್ಯೂಸ್

ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ  ರೇಣುಕಾಚಾರ್ಯ ದಂಪತಿ -Vishwanews24

ದಾವಣಗೆರೆ : ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಬಾಲಕಿಯನ್ನು ದತ್ತು ಪಡೆಯಲು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ದಂಪತಿ ನಿರ್ಧರಿಸಿದ್ದಾರೆ. ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ದೊಡ್ಡೇರಹಳ್ಳಿ ಗ್ರಾಮದ ಬಾಲಕಿಯನ್ನು ಭೇಟಿ ಮಾಡಿದ ರೇಣುಕಾಚಾರ್ಯ ಹಾಗೂ ಪತ್ನಿ ಸುಮಿತ್ರಾ ಅವರು ಸಾಂತ್ವನ ಹೇಳಿದ್ದಾರೆ.

ಬಾಲಕಿ ಕೆಲ ವರ್ಷಗಳ ಹಿಂದೆ ತಾಯಿಯನ್ನು ಕಳೆದುಕೊಂಡು ಎರಡು ತಿಂಗಳ ಹಿಂದೆ ಕೋವಿಡ್‌ನಿಂದ ತಂದೆಯನ್ನು ಕಳೆದುಕೊಂಡಿದ್ದಳು. ಹೀಗಾಗಿ ಗ್ರಾಮಕ್ಕೆ ತೆರಳಿ ಮಗುವಿಗೆ ಹೇಳಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಆರ್ಥಿಕ ಸಹಾಯ ಮಾಡಿದ್ದಾರೆ.

ಇದೇ ವೇಳೆ ಮಾತನಾಡಿದ ರೇಣುಕಾಚಾರ್ಯ ಅವರು, ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆದು ತಂದೆ ತಾಯಿ ಸ್ಥಾನದಲ್ಲಿ ನಿಂತು ಮುಂದಿನ ವಿಧ್ಯಾಭ್ಯಾಸ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಬಾಲಕಿಯನ್ನು ಬಾಚಿ ತಪ್ಪಿಕೊಂಡು ಸಾಂತ್ವನ ಹೇಳಿದ ರೇಣು ದಂಪತಿ.