ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

Featured, ರಾಜ್ಯ ನ್ಯೂಸ್

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ

ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ತಡರಾತ್ರಿ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಸಂಭವಿಸಿದೆ.

ಶಿವಣ್ಣ (40) ಹಾಗೂ ಇವರ ಮಕ್ಕಳಾದ ಜೀವನ್ (10) ಮತ್ತು ಪ್ರಾಣೇಶ್ (6) ಮೃತಪಟ್ಟವರು. ಪತ್ನಿಯು ಗಂಡನಿಂದ ದೂರವಾಗಿದ್ದರಿಂದ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಇದರಿಂದ ಮನನೊಂದ ಶಿವಣ್ಣ, ಮಕ್ಕಳಿಗೆ ವಿಷವಿಕ್ಕಿ ಅಥವಾ ಉಸಿರುಗಟ್ಟಿಸಿ ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

ಶನಿವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಮಕ್ಕಳ ಮೃತದೇಹಗಳು ಮಂಚದ ಮೇಲೆ ಮಲಗಿದ್ದ ಸ್ಥಿತಿಯಲ್ಲೇ ಪತ್ತೆಯಾಗಿವೆ. ಕುಣಿಗಲ್ ಸಿಪಿಐ ಮಾಧ್ಯಾ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಲ್ಕೆರೆ ಗ್ರಾಮದ ಮಲ್ಲೇಶ್ವರ ಸ್ವಾಮಿ ದೇವಾಲಯದ ಅರ್ಚಕನಾಗಿದ್ದ ಶಿವಣ್ಣ ತನ್ನ ಅಕ್ಕನ ಮಗ ಹೇಮಂತ್ ಎಂಬಾತನನ್ನು ತನ್ನ ಮನೆಯಲ್ಲೇ ಇರಿಸಿಕೊಂಡು ಸಾಕಿ ಸಲಹಿದ್ದರು. ಆದರೆ ವಾರದ ಹಿಂದೆ ಹೇಮಂತ್ ಜೊತೆ ಶಿವಣ್ಣನ ಪತ್ನಿ ಕಾವ್ಯಾ ಓಡಿ ಹೋಗಿದ್ದಳು. ಬಳಿಕ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಗ್ರಾಮಸ್ಥರ ಮಧ್ಯಸ್ಥಿಕೆಯಲ್ಲಿ ವಾಪಸ್ ಆಲ್ಕೆರೆ ಗ್ರಾಮಕ್ಕೆ ಬಂದಿದ್ದ ಕಾವ್ಯಾ ಪತಿ ಮನೆಯಲ್ಲಿ ಇಲ್ಲದ ವೇಳೆ ಮನೆಯಲ್ಲಿದ್ದ ನಗ-ನಗದು ದೋಚಿ ಮತ್ತೆ ಪರಾರಿಯಾಗಿದ್ದಳು. ಇದರಿಂದ ಮನನೊಂದಿದ್ದ ಶಿವಣ್ಣ ಇಬ್ಬರು ಮಕ್ಕಳನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

Leave a Reply