ಕ್ಯಾನ್ಸರ್​ ಪೀಡಿತರಿಗಾಗಿ ಕೂದಲು ದಾನ ಮಾಡಿದ ಮಾಧುರಿ ದೀಕ್ಷಿತ್ ಪುತ್ರ – Vishwanews24

Featured, ರಾಷ್ಟ್ರ ನ್ಯೂಸ್

ಕ್ಯಾನ್ಸರ್​ ಪೀಡಿತರಿಗಾಗಿ ಕೂದಲು ದಾನ ಮಾಡಿದ ಮಾಧುರಿ ದೀಕ್ಷಿತ್ ಪುತ್ರ – Vishwanews24

ಮುಂಬೈ: ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಮತ್ತು ಶ್ರೀರಾಮ್ ನೆನೆ ಅವರ ಕಿರಿಯ ಪುತ್ರ ರಿಯಾನ್ ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನದಂದು (ನವೆಂಬರ್ 7) ತಮ್ಮ ತಲೆ ಕೂದಲನ್ನು ದಾನ ಮಾಡಿದ್ದಾರೆ.

https://www.instagram.com/reel/CV-U2jIg6kI/?utm_source=ig_web_copy_link

ರಿಯಾನ್ ತಲೆ ಕೂದಲು ಕ್ಷೌರ ಮಾಡುತ್ತಿರುವ ವೀಡಿಯೋವನ್ನು ತಾಯಿ ಮಾಧುರಿ ದೀಕ್ಷತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕ್ಯಾನ್ಸರ್ ಪೀಡಿತರಿಗೆ ಅವಶ್ಯಕವಾದ ಉದ್ದದ ತಲೆ ಕೂದಲನ್ನು ದಾನ ಮಾಡಲು 2 ವರ್ಷಗಳಿಂದ ತಮ್ಮ ಮಗ ರಾಯನ್ ತಲೆ ಕೂದಲು ಕತ್ತರಿಸಿಲ್ಲ. ರಿಯಾನ್ ಈ ನಿರ್ಧಾರ ನಮಗೆ ಆಶ್ಚರ್ಯವನ್ನುಂಟು ಮಾಡಿದೆ. ಅಲ್ಲದೆ ಅತಿ ಹೆಚ್ಚು ಹೆಮ್ಮೆ ಉಂಟು ಮಾಡಿದೆ ಎಂದು ಮಾಧುರಿ ದೀಕ್ಷಿತ್ ತಮ್ಮ ಇನ್‍ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ. ರಾಯನ್ ಈ ಕಾರ್ಯಕ್ಕೆ ಸೋಶಿಯಲ್ ಮೀಡಿಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ದ. ಕ ಜಿಲ್ಲಾಡಳಿತದಿಂದ ಸನ್ಮಾನ – Vishwanews24