ಕ್ಷೇತ್ರದ ಜನರ ವಿಶ್ವಾಸಕ್ಕೆ ದ್ರೋಹ ಬಗೆದು ಹಣ, ಅಧಿಕಾರಕೋಸ್ಕರ ಪಕ್ಷಾಂತರ ಮಾಡುವುದಿಲ್ಲ : ಶೃಂಗೇರಿ ಶಾಸಕ ರಾಜೇಗೌಡ -Vishwanews24
ಬೆಳ್ತಂಗಡಿ: ಕ್ಷೇತ್ರದ ಜನರ ವಿಶ್ವಾಸಕ್ಕೆ ದ್ರೋಹ ಬಗೆದು ಹಣ, ಅಧಿಕಾರಕೋಸ್ಕರ ಪಕ್ಷಾಂತರ ಮಾಡುವುದಿಲ್ಲ. ಅದರ ಕುರಿತು ಗಮನ ಕೊಡುವುದಿಲ್ಲ. ತನ್ನದೇನಿದ್ದರೂ ಕ್ಷೇತ್ರದ ಅಭಿವೃದ್ಧಿ ಮಾತ್ರ ಎಂದು ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶೃಂಗೇರಿ ಶಾಸಕ ರಾಜೇಗೌಡ ಸ್ಪಷ್ಪಪಡಿಸಿದರು.
ಬಿಜೆಪಿಗೆ ಬರುವಂತೆ ನಿರಂತರ ಒತ್ತಡಗಳು, ಕರೆಗಳು ಬರುತ್ತಿದೆ. ಬಿಜೆಪಿಯ ಹಿರಿಯ ನಾಯಕರುಗಳು ಕರೆ ಮಾಡಿ ಹಣ, ಅಧಿಕಾರದ ಎಲ್ಲ ರೀತಿಯ ಆಮಿಷಗಳನ್ನೂ ಹಾಕುತ್ತಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಅದು ಹೆಚ್ಚಾಗಿದೆ. ಆದರೆ ತಾನು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಪ್ರಕಟಿಸಿದರು.
ಬಿಜೆಪಿಯವರು ಅಧಿಕಾರಕ್ಕಾಗಿ ಯಾವ ಹಂತಕ್ಕೆ ಇಳಿಯಲೂ ಸಿದ್ದರಾಗುತ್ತಿದ್ದಾರೆ. ಇದು ಪ್ರಜಾಪ್ತಭುತ್ವವನ್ನು ಅಣಕಿಸುವ ಕಾರ್ಯವಾಗಿದೆ.
ಒಮ್ಮೆ ಚುನಾವಣೆಯಲ್ಲಿ ಗೆದ್ದವರು ಅವಧಿ ಮುಗಿಯುವವರೆಗೂ ಆ ಪಕ್ಷದಲ್ಲಿಯೇ ಉಳಿದುಕೊಳ್ಳಬೇಕು. ಅವಧಿ ಮುಗಿದು ಮುಂದಿನ ಚುನಾವಣೆಯ ಸಂದರ್ಭದಲ್ಲಿ ಪಕ್ಷಾಂತರ ಮಾಡುವುದಿದ್ದರೆ ಮಾಡಲಿ ಎಂದರು.
ಬೆಳ್ತಂಗಡಿ ಶಾಸಕರು ಬಂದು ಭೇಟಿಯಾಗಿದ್ದರು ಅವರು ರಾಜಕೀಯ ನಿಲುವುಗಳ ಕುರಿತು ಮಾತ್ರ ಮಾತನಾಡಿದ್ದರು. ಬೇರೆ ಯಾವುದೇ ಆಮಿಷ, ಒತ್ತಡ ಹೇರಿಲ್ಲ. ನಾರ್ಮಲ್ ಭೇಟಿ ಮಾಡಿದ್ದರು ಎಂದರು.
