ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ : ಸಚಿವ ಮಧು ಬಂಗಾರಪ್ಪ – vishwanews24

Featured, ರಾಜ್ಯ ನ್ಯೂಸ್

ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕೊರತೆಗಳನ್ನು ನೀಗಿಸಲು ಹೆಚ್ಚುವರಿಯಾಗಿ ಶಿಕ್ಷಕರ ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತುಂಬಲು ಸಿಎಂ ಬಳಿ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ದಿನಾಚರಣೆ ಹಾಗೂ ₹2.30 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸಭಾಂಗಣ ಮತ್ತು ನೂತನ ಆಡಳಿತ ಮಂಡಳಿ ಕಚೇರಿ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.43 ಸಾವಿರ ಶಿಕ್ಷಕರ ಕೊರತೆ ಇರುವುದನ್ನು ಗಮನಿಸಿ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ. 32 ಸಾವಿರ ಶಿಕ್ಷಕರ ವರ್ಗಾವಣೆ ಮಾಡಿ ಯಶಸ್ಸು ಕಂಡಿದ್ದೇವೆ ಎಂದರು.

Budget 2024 : ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು ‘300 ಯೂನಿಟ್ ಉಚಿತ ವಿದ್ಯುತ್’ :  ನಿರ್ಮಲಾ ಸೀತಾರಾಮನ್ – vishwanews24

ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರೆತಿರುವುದು ಪುಣ್ಯದ ಫಲ. ಈ ಅವಕಾಶವನ್ನು ಯಶಸ್ವಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ.ಶಿಕ್ಷಣ ಕ್ಷೇತ್ರದ ಅನುಭವವಿಲ್ಲದ ನನಗೆ ಮುಖ್ಯಮಂತ್ರಿ ಅವರು ನೀಡಿದ ಶಿಕ್ಷಣ ಸಚಿವ ಸ್ಥಾನವನ್ನು ದೇವರ ಕೆಲಸ ಎಂದು ಅರಿತು ರಾಜ್ಯದ 76 ಸಾವಿರ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು 1.20 ಕೋಟಿ ವಿದ್ಯಾರ್ಥಿಗಳ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಮಕ್ಕಳ ಭವಿಷ್ಯಕ್ಕಾಗಿ ಯಾವುದೇ ರಾಜಕೀಯ ಪಕ್ಷದ ಪರ ಅಥವಾ ವಿರುದ್ಧ ಇಲ್ಲದಂತೆ ನ್ಯಾಯಸಮ್ಮತ ಪಠ್ಯ ಪರಿಷ್ಕರಣೆ ಮಾಡಿದ್ದೇವೆ ಎಂದರು. ಶಿಕ್ಷಣ ಇಲಾಖೆಯಲ್ಲೂ ನ್ಯೂನತೆ ಮತ್ತು ಕೊರತೆಗಳಿವೆ. ಅವುಗಳನ್ನು ಸರಿಪಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.

Budget 2024 : ಮಹಿಳೆಯರಿಗೆ ಗುಡ್ ನ್ಯೂಸ್ : ‘ಕೇಂದ್ರ ಸರ್ಕಾರ’ದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲು ‘ಲಖ್ ಪತಿ ದೀದಿ ಯೋಜನೆ’ ಜಾರಿ – vishwanews24

Leave a Reply