ಗಡಿ ವಿವಾದ : ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ -Vishwanews24
ಗಡಿ ವಿವಾದ : ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ -Vishwanews24
ಬೆಳಗಾವಿ : ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಪುಂಡಾಟಿಕೆ ಹಿನ್ನೆಲೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಮಧ್ಯೆ ಬಸ್ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳಗಾವಿ ಮಾರ್ಗವಾಗಿ ನಿತ್ಯ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ 400 ಕ್ಕೂ ಹೆಚ್ಚು ಬಸ್ ಗಳ ಸಂಚಾರ ಬಂದ್ ಆಗಿದೆ. ಜೊತೆಗೆ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ 58 ಬಸ್ ಗಳ ಸಂಚಾರವೂ ಸ್ಥಗಿತಗೊಂಡಿದೆ.
ಉಡುಪಿ: ರಮಿತಾ ಶೈಲೇಂದ್ರ ರಾವ್ ಅವರಿಗೆ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ ಪ್ರದಾನ -Vishwanews24
ನಿನ್ನೆ ಕೊಲ್ಲಾಪುರ ಬಸ್ ನಿಲ್ದಾಣಕ್ಕೆ ನುಗ್ಗಿ ಪುಂಡಾಟಿಕೆ ಮೆರೆದಿದ್ದ ಶಿವಸೇನೆ ಕರ್ನಾಟಕ ಬಸ್ ಗಳ ಮೇಲೆ ಮರಾಠಿ ಬರಹ ಬರೆದಿರುವ ಘಟನೆ ಕೊಲ್ಹಾಪುರ ಹಾಗೂ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುವಂತೆ ಮಾಡಿದೆ. ಹಾಗಾಗಿ ಮುಂಜಾಗೃತಾ ಕ್ರಮವಾಗಿ ಉಭಯ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
