ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ: ಸಚಿವ ಜಾರ್ಜ್ – vishwanews24

Featured, ರಾಜ್ಯ ನ್ಯೂಸ್

ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ: ಸಚಿವ ಜಾರ್ಜ್

ಬೆಂಗಳೂರು: ಕಳೆದ ಎರಡ್ಮೂರು ತಿಂಗಳುಗಳಿಂದ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಿಲ್ಲ. ಇದಕ್ಕೆ ರಾಜ್ಯದಾದ್ಯಂತ ಮಹಿಳೆಯರು, ಫಲಾನುಭವಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ, ‘ಅದೇನು ತಿಂಗಳ ಸಂಬಳ ಅಲ್ವಲ್ಲಾ’ ಎಂದು ಸಚಿವ ಕೆಜೆ ಜಾರ್ಜ್ ಉಡಾಫೆ ಉತ್ತರ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ದುಡ್ಡು ಬಂದಿಲ್ಲ ಎಂದು ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಸಚಿವರು ಮಾತ್ರ ಉಡಾಫೆ ಉತ್ತರ ಕೊಟ್ಟಿದ್ದಾರೆ. ಪ್ರತಿ ತಿಂಗಳೂ ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ವರ್ಗಾವಣೆ ಮಾಡುತ್ತೇವೆ ಎಂದು ಚುನಾವಣೆಯ ವೇಳೆ ಮಾತು ಕೊಟ್ಟು ಅಧಿಕ್ಕಾರಕ್ಕೇರಿದ್ದರು. ಆದರೆ ಈಗ, ಗೃಹಲಕ್ಷ್ಮಿ ಹಣ ತಿಂಗಳ ತಿಂಗಳ ಸಂಬಳ ಅಲ್ವಲ್ಲಾ ಎಂದು ಜಾರ್ಜ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹೆಚ್ಚಳ ಪ್ರಕರಣ : ಕರ್ನಾಟಕದ ಗಡಿಭಾಗದಲ್ಲಿ ಹೈಅಲರ್ಟ್ – vishwanews24

ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಕೂಡ ಹಾರಿಕೆ ಉತ್ತರ ನೀಡಿದರು. ಸಿಎಂ ಸಿದ್ದರಾಮಯ್ಯ ಯಾವುದೇ ಗ್ಯಾರಂಟಿ ನಿಲ್ಲಿಸಲ್ಲ, ಸದ್ಯದಲ್ಲೇ ಹಣ ಹಾಕುತ್ತೇವೆ ಎಂದು ಭರವಸೆ ಹೇಳಿದರು.

ಈ ನಡುವೆ ಗ್ಯಾರಂಟಿ ನೀಡುತ್ತೇವೆ ಎಂದು ಘೋಷಿಸಿಕೊಂಡು ಅಧಿಕಾರಕ್ಕೆ ಬಂದ ಸರ್ಕಾರದ ಸಚಿವರಿಂದ ಇಂತಹ ಬೇಜವಾಬ್ಧಾರಿಯುತ ಉತ್ತರ ಬಂದಿರುವುದಕ್ಕೆ ಸಾರ್ವಜನಿಕಕರಿಂದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಉಡುಪಿ : ಸ್ಕೂಟರ್ – ಗೂಡ್ಸ್ ರಿಕ್ಷಾ ಮುಖಾಮುಖಿ ಡಿಕ್ಕಿ : ಸವಾರ ಮೃತ್ಯು , ಸಹಸವಾರ ಗಂಭೀರ – vishwanews24

Leave a Reply