ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ಘೋಷಣೆ ಮಾಡಿದ್ದೆವು. ಮಾತಿನಂತೆ ನಡೆದುಕೊಳ್ಳುತ್ತೇವೆ : ಪ್ರಭು ಚವ್ಹಾಣ್ -Vishwanews24

Featured, ರಾಜ್ಯ ನ್ಯೂಸ್

ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ಘೋಷಣೆ ಮಾಡಿದ್ದೆವು. ಮಾತಿನಂತೆ

ನಡೆದುಕೊಳ್ಳುತ್ತೇವೆ : ಪ್ರಭು ಚವ್ಹಾಣ್ -Vishwanews24

ಕಲಬುರಗಿ: ಗೋಹತ್ಯೆ ನಿಷೇಧ ಕಾನೂನಿನ ವಿಚಾರವಾಗಿ ಮುಂಬರುವ ಅಧಿವೇಶನದ ಸಂದರ್ಭ ಚರ್ಚೆ ನಡೆಸಿ ಜಾರಿಗೆ ತರಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಹೇಳಿದ್ದಾರೆ.

ಜಾನುವಾರಗಳ ಚಿಕಿತ್ಸೆಗೆಂದು ಇಲಾಖೆಯ ವತಿಯಿಂದ ಹೊಸ ಆಂಬುಲೆನ್ಸ್‌ಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ರಾಜ್ಯಾದ್ಯಂತ ಮುಂದೆ 41 ಆಂಬುಲೆನ್ಸ್‌‌ ಖರೀದಿ ಮಾಡಲಾಗಿದೆ. ಮುಂದೆ ಅಧಿಕಾರಕ್ಕೆ ಬಂದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ಘೋಷಣೆ ಮಾಡಿದ್ದೆವು. ನಾವು ಈ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಈ ಸಂದರ್ಭ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಸಿಎಂ ಬಿಎಸ್‌ವೈ ಅವರು ಸಂಪುಟದಲ್ಲಿ ಕಲಬುರ್ಗಿ ಜಿಲ್ಲೆಗೆ ಪ್ರಾತಿನಿಧ್ಯ ನೀಡುವ ವಿಚಾರವಾಗಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.