ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಗೆ ಭಾರಿ ಆಘಾತ , 15000 ಮತಗಳಿಂದ ಸಿಪಿ ಯೋಗೇಶ್ವರ್ ಭಾರಿ ಮುನ್ನಡೆ – vishwanews24

Featured, ರಾಜ್ಯ ನ್ಯೂಸ್

ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಗೆ ಭಾರಿ ಆಘಾತ , 15000 ಮತಗಳಿಂದ ಸಿಪಿ ಯೋಗೇಶ್ವರ್ ಭಾರಿ ಮುನ್ನಡೆ

ರಾಮನಗರ: ಚನ್ನಪಟ್ಟಣದಲ್ಲಿ ಹಾವು ಏಣಿ ಆಟ ಆರಂಭವಾಗಿದೆ. ನಿಖಿಲ್‌ ಕುಮಾರಸ್ವಾಮಿ 9ನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್‌ ( ಅವರಿಗೆ 15000 ಮತಗಳ ಮುನ್ನಡೆ ಸಿಕ್ಕಿದೆ. ನಗರದ ಪ್ರದೇಶದ ಎಣಿಕಾ ಕಾರ್ಯದಲ್ಲಿ ಸಿಪಿವೈ ಮುನ್ನಡೆ ಸಾಧಿಸಿದ್ದಾರೆ.

ಚನ್ನಪಟ್ಟಣದಲ್ಲಿ ಒಟ್ಟು 20 ಸುತ್ತುಗಳಿವೆ. ಚನ್ನಪಟ್ಟಣದಲ್ಲಿ ಯಾರೇ ಗೆದ್ದರೂ 3-5 ಸಾವಿರ ಅಂತರಗಳಿಂದ ಗೆಲವು ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಉಳಿದ 13 ಸುತ್ತುಗಳಲ್ಲಿ ಯಾರಿಗೆ ಮುನ್ನಡೆ ಸಿಗುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ.

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: 70 ವರ್ಷದ ವೃದ್ದನ ಬಂಧನ – vishwanews24

Leave a Reply