ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಬಸವರಾಜ ಬೊಮ್ಮಾಯಿ -Vishwanews24

Featured, ರಾಜ್ಯ ನ್ಯೂಸ್

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಬಸವರಾಜ ಬೊಮ್ಮಾಯಿ -Vishwanews24

ಚಿಕ್ಕಬಳ್ಳಾಪುರ, : ಗುಡಿಬಂಡೆಯ ಹಿರೇನಾಗವೇಲಿಯಲ್ಲಿ ಸಂಭವಿಸಿದ ದುರಂತವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತಂತೆ ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜಿಲೆಟಿನ್ ಸ್ಫೋಟ ಸಂಭವಿಸಿದ ಗುಡಿಬಂಡೆಯ ಹಿರೇನಾಗವೇಲಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಿ : ಸಿದ್ದರಾಮಯ್ಯ -Vishwanews24

ಈ ವೇಳೆ ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಘಟನೆಗೆ ಕಾರಣಗಳೇನು ಎಂಬುದರ ಬಗ್ಗೆ ಮಾಹಿತಿ ಪಡೆದ ಬೊಮ್ಮಾಯಿ, ಸೂಕ್ತ ತನಿಖೆಗೆ ಸೂಚಿಸಿದ್ದಾರೆ. ಈ ವೇಳೆ ಆರೋಗ ಸಚಿವ ಡಾ.ಕೆ.ಸುಧಾಕರ್ ಜೊತೆಗಿದ್ದರು.