ಚಿಕ್ಕಮಗಳೂರು : ಋಷ್ಯಶೃಂಗೇಶ್ವರ ಜಾತ್ರೆಯಲ್ಲಿ ಅನ್ಯಧರ್ಮಿಯರ ವ್ಯಾಪಾರಿಗಳಿಗೆ ನಿರ್ಬಂಧ  : ಹಿಂದೂಪರ ಸಂಘಟನೆಗಳ ಮನವಿ – Vishwanews24

Featured, ರಾಜ್ಯ ನ್ಯೂಸ್

ಚಿಕ್ಕಮಗಳೂರು : ಋಷ್ಯಶೃಂಗೇಶ್ವರ ಜಾತ್ರೆಯಲ್ಲಿ ಅನ್ಯಧರ್ಮಿಯರ ವ್ಯಾಪಾರಿಗಳಿಗೆ ನಿರ್ಬಂಧ  : ಹಿಂದೂಪರ ಸಂಘಟನೆಗಳ ಮನವಿ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ಧರ್ಮ ದಂಗಲ್ ಶುರುವಾಗಿದ್ದು, ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರ ಜಾತ್ರೆಯಲ್ಲಿ ಅನ್ಯಧರ್ಮಿಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂಪರ ಸಂಘಟನೆಗಳು ಮನವಿ ಮಾಡಿವೆ.

ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಅನ್ಯ ಕೋಮಿನ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವಂತೆ ಹಿಂದೂ ಸಂಘಟನೆಗಳು ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿವೆ. ಮಾರ್ಚ್‌ 19ರಂದು ಮಳೆ ದೇವರು ಎಂದೇ ಖ್ಯಾತಿಯಾಗಿರುವ ಕಿಗ್ಗಾ ಋಷ್ಯಶೃಂಗೇಶ್ವರ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ.

ಹಿಂದೂಗಳ ಜಾತ್ರೆ-ಸಭೆ, ಸಮಾರಂಭದಲ್ಲಿನ ವ್ಯಾಪಾರದಲ್ಲಿ ಬಂದ ಲಾಭವನ್ನು ದೇಶವಿರೋಧಿ ಚಟುವಟಿಕೆ ಬಳಸುತ್ತಾರೆಂಬ ಸಂದೇಹವಿದೆ. ಹಾಗಾಗಿ ಋಷ್ಯಶೃಂಗೇಶ್ವರ ಜಾತ್ರೆಗೆ ಮುಸ್ಲಿಮರು ವ್ಯಾಪಾರಕ್ಕೆ ಬರುವುದು ಬೇಡವೆಂದು ನಿರ್ಬಂಧಿಸುವಂತೆ ʼಜಾಗೃತ ಹಿಂದೂ ಬಾಂಧವರʼ ಹೆಸರಿನಲ್ಲಿ ತಹಶೀಲ್ದಾರ್‌ಗೆ ಮನವಿ ಮಾಡಲಾಗಿದೆ.

ಮಲ್ಪೆ :  ಬಂದರಿನಲ್ಲಿ ಹೂಳೆತ್ತುವ ಪ್ರಕ್ರಿಯೆ ಕೊನೆಗೂ ಆರಂಭ ;- ಮೇ ಅಂತ್ಯಕ್ಕೆ ಪೂರ್ಣ – Vishwanews24

Leave a Reply