ಚಿಕ್ಕಮಗಳೂರು : ಕಾಡ್ಗಿಚ್ಚು – ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿ – vishwanews24
ಚಿಕ್ಕಮಗಳೂರು : ಕಾಡ್ಗಿಚ್ಚು – ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿ
ಚಿಕ್ಕಮಗಳೂರು: ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ಕಳಸ ತಾಲೂಕಿನ ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ನಡೆದಿದೆ.
ಮಂಗಳವಾರ ಸಂಜೆ ಕಾಡಿಗೆ ಬೆಂಕಿ ಹಬ್ಬಿದ್ದು ನೋಡನೋಡ್ತಿದ್ದಂತೆ ಅರಣ್ಯ ಹೊತ್ತಿ ಉರಿದಿದೆ. ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸಪಟ್ಟರೂ ಗಾಳಿಗೆ ವೇಗಕ್ಕೆ ಬೆಂಕಿಯ ಕೆನ್ನಾಲಿಗೆ ಹೆಚ್ಚುತ್ತಲೇ ಇತ್ತು.
ಬಂಟ್ವಾಳ : ದ್ವಿಚಕ್ರ ವಾಹನ ಢಿಕ್ಕಿ ; ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು – vishwanews24
ಕಳಸ ತಾಲೂಕಿನ ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಮುಗಿಲೆತ್ತರದ ಬೆಟ್ಟಗುಡ್ಡಗಳಲ್ಲಿ ಬೆಂಕಿ ಬಿದ್ದ ಪರಿಣಾಮ ಗಾಳಿಯ ವೇಗಕ್ಕೆ ಬೆಂಕಿ ಒಂದು ಗುಡ್ಡದಿಂದ ಮತ್ತೊಂದು ಗುಡ್ಡಕ್ಕೆ ಹಬ್ಬಿದ್ದು ಅರಣ್ಯ ಇಲಾಖೆಗೆ ಬೆಂಕಿ ನಂದಿಸುವುದು ಸವಾಲಾಗಿತ್ತು.
ಕೊನೆಗೂ ಅರಣ್ಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆ ಜೊತೆ ಸಸ್ಯಸಂಪತ್ತು ನಾಶವಾಗಿರುವ ಜೊತೆಗೆ ಪ್ರಾಣಿ-ಪಕ್ಷಿಗಳು ಕೂಡ ಸುಟ್ಟುಕರಕಲಾಗಿವೆ.
ಮಂಗಳೂರು: ಸೈಬರ್ ವಂಚನೆ ಪ್ರಕರಣದ ಆರೋಪಿ ಜೊತೆ ಸೆಲ್ಫಿ: ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಅಮಾನತು – vishwanews24
