ಚಿಕ್ಕಮಗಳೂರು: ದತ್ತಪೀಠ ಮಾರ್ಗದಲ್ಲಿ ಮೊಳೆ ಚೆಲ್ಲಿದ್ದ ಇಬ್ಬರ ಸೆರೆ – Vishwanews24

Featured, ರಾಜ್ಯ ನ್ಯೂಸ್

ದತ್ತಪೀಠಕ್ಕೆ ಸಾಗುವ ಮಾರ್ಗದಲ್ಲಿ ಮೊಳೆಗಳನ್ನ ಚೆಲ್ಲಿದ್ದ ಆರೋಪಿಗಳು

ಮೊಹಮದ್‌ ಶಹಬಾಸ್‌ ಹಾಗೂ ವಾಹೀದ್‌ ಹುಸೇನ್‌ ಇಬ್ಬರ ಬಂಧನ

ಚಿಕ್ಕಮಗಳೂರು: ದತ್ತ ಜಯಂತಿ ಸಂದರ್ಭದಲ್ಲಿ ದತ್ತಪೀಠಕ್ಕೆ ಸಾಗುವ ಮಾರ್ಗದಲ್ಲಿ ಅಪಘಾತವಾಗಲಿ ಎಂಬ ಉದ್ದೇಶದಿಂದ ಕಡಿದಾದ ತಿರುವುಗಳಲ್ಲಿ ಮೊಳೆಗಳನ್ನು ಚೆಲ್ಲಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಉಳಿದವರು ತಲೆಮರೆಸಿಕೊಂಡಿದ್ದು ಶೋಧ ಕಾರ್ಯ ನಡೆದಿದೆ ಎಂದು ಎಸ್‌ಪಿ ಉಮಾ ಪ್ರಶಾಂತ್‌ ತಿಳಿಸಿದ್ದಾರೆ.

ಮಣಿಪಾಲ: ಮೆದುಳು ಜ್ವರ ವೈರಸ್‌ನಿಂದ ಹರಡುವ ಕಾಯಿಲೆ , ಲಸಿಕೆ ಪಡೆಯಲು ಭಯಬೇಡ – Vishwanews24

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೈಮರ ದತ್ತಪೀಠ ಓಡಾಡುವ ಮಾರ್ಗದಲ್ಲಿ ವಾಹನಗಳಿಗೆ ತೊಂದರೆಯಾಗಲಿ ಎಂಬ ಉದ್ದೇಶದಿಂದ ತಿರುವುಗಳಲ್ಲಿ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಮೊಳೆಗಳನ್ನು ಚೆಲ್ಲಿದ್ದು ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೃತ್ಯ ನಡೆಸಿದ ಕಿಡಿಗೇಡಿಗಳ ಪತ್ತೆಗಾಗಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಚಿಕ್ಕಮಗಳೂರು ನಗರದ ಹಾರ್ಡ್‌ವೇರ್‌ ಶಾಪ್‌ನಲ್ಲಿ ಅದೇ ತೆರನಾದ ಮೊಳೆಗಳನ್ನು ಇಬ್ಬರು ವ್ಯಕ್ತಿಗಳು ನಾಲ್ಕು ಕೆಜಿ ಖರೀದಿಸಿದ್ದು, ಖಚಿತ ಮಾಹಿತಿ ಮೇರೆಗೆ ದುಬೈನಗರದ ಮೊಹಮದ್‌ ಶಹಬಾಸ್‌ (29) ಹಾಗೂ ವಾಹೀದ್‌ ಹುಸೇನ್‌ (21) ಎಂಬುವರನ್ನು ಬಂಧಿಸಲಾಗಿದೆ.

ಈ ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಮಾಹಿತಿ ಇದ್ದು, ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ತಂಡ ಕಾರ್ಯಪ್ರವೃತ್ತವಾಗಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ನೀಡಿದ್ದಾರೆ.

ಮಲ್ಪೆ: ಮ್ಯಾಂಡಸ್‌ ಚಂಡಮಾರುತ ಪ‌ರಿಣಾಮ: ದಡದತ್ತ ಧಾವಿಸಿದ ಬೋಟುಗಳು – Vishwanews24

Leave a Reply