ಚಿಕ್ಕಮಗಳೂರು ಬಿಜೆಪಿ ಮುಖಂಡನನ್ನು ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!
ಚಿಕ್ಕಮಗಳೂರು ನಗರದ ಭಾರತೀಯ ಜನತಾಪಕ್ಷದ ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಿಕ್ಕಮಗಳೂರು ಸಮೀಪದ ಉಪ್ಪಳ್ಳಿ ನಿವಾಸು ಮುಹಮ್ಮದ್ ಅನ್ವರ್ ಎಂಬವರನ್ನು ಕೆಲವು ದುಷ್ಕರ್ಮಿಗಳು ನಿನ್ನೆ ರಾತ್ರಿ ಸುಮಾರು 10 ಗಂಟೆಯ ಸಂದರ್ಭದಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆಯು ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಮುಹಮ್ಮದ್ ಅನ್ವರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ನಿನ್ನೆ ರಾತ್ರಿ ಮುಹಮ್ಮದ್ ಅನ್ವರ್ ರವರು ಚಿಕ್ಕಮಗಳೂರು ನಗರದ ಗೌರಿ ಕಾಲುವೆಯ ಸಿಂಗಾರಿ ನಿಲಯ ರಸ್ತೆಯಲ್ಲಿ ನಿಂತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಚಾಕು ಬಳಸಿ ಯದ್ವಾತದ್ವಾ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಎದೆ ಮತ್ತು ಪಕ್ಕಲುಬು ಭಾಗಕ್ಕೆ ಇರಿದಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
