ಚಿತ್ರ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು ..! vishwanews24

Featured, ರಾಜ್ಯ ನ್ಯೂಸ್

ಚಿತ್ರ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ..!

ಬೆಂಗಳೂರು: ಹಲವು ಹಿಟ್ ಸಿನಿಮಾಗಳ ನಿರ್ದೇಶಕ ಯೋಗರಾಜ್ ಭಟ್ ಅವರ ವಿರುದ್ಧ ಎಫ್‌ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ.

ಮನದ ಕಡಲು ಸಿನಿಮಾದ ಚಿತ್ರೀಕರಣದ ವೇಳೆ ಸೆ.5ರ ಗುರುವಾರ 30 ಅಡಿ ಮೇಲಿನಿಂದ ಬಿದ್ದು ಲೈಟ್ ಬಾಯ್ ಸಾವನ್ನಪ್ಪಿದ ಹಿನ್ನೆಲೆ ಕನ್ನಡ ಚಿತ್ರರಂಗದ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು ಉತ್ತರ ಹೊರವಲಯದ ವಿಆರ್‌ಎಲ್ ಅರೆನಾ ಬಳಿ ಸಂಭವಿಸಿದ ಘಟನೆಯಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಶಿವರಾಜ್ (30) ಮೃತಪಟ್ಟಿದ್ದಾರೆ.

ಕುಂದಾಪುರ: ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಎರಡು ದಶಕಗಳಿಗೂ ಹೆಚ್ಚು ಕಾಲ ವೃತ್ತಿಜೀವನದಲ್ಲಿ ಮುಂಗಾರು ಮಳೆ, ಗಾಳಿಪಟ ದಂತಹ ಹಿಟ್‌ ಸಿನಿಮಾಗಳನ್ನು ನೀಡಿದ್ದ ಯೋಗರಾಜ್‌ ಭಟ್ ಅವರನ್ನು ಮಾದನಾಯಕನಹಳ್ಳಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಆರೋಪಿ ಸಂಖ್ಯೆ 3 ಎಂದು ನಮೂದಿಸಲಾಗಿದೆ. ‌ಮ್ಯಾನೇಜರ್ ಸುರೇಶ್ ಅವರನ್ನು ಆರೋಪಿ ಸಂಖ್ಯೆ 1 ಎಂದು ಹೆಸರು ದಾಖಲಾಗಿಸಲಾಗಿದೆ.

ಚಿತ್ರದ ಚಿತ್ರೀಕರಣದ ವೇಳೆ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದೆ ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರು : ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ: ದೇವದಾಸ್ ಕಾಪಿಕಾಡ್ ಸ್ಪಷ್ಟನೆ – vishwanews24

Leave a Reply