ಚುನಾವಣಾ ವರ್ಷ ಎಂದು ಧ್ವನಿ ವರ್ಧಕ ವಿಷಯದಲ್ಲಿ ಕ್ಯಾತೆ ತೆಗೆಯುತ್ತಿದ್ದಾರೆ : ಸಿದ್ದರಾಮಯ್ಯ – Vishwanews24

Featured, ರಾಜ್ಯ ನ್ಯೂಸ್

ದೇವಸ್ಥಾನ, ಮಸೀದಿ, ಚರ್ಚ್‌‌ಗಳಲ್ಲಿನ ಧ್ವನಿ ವರ್ಧಕಗಳಿಂದ ಯಾರಿಗೆ ತೊಂದರೆ ಆಗಿದೆ?

ಎಲ್ಲ ಬೆಳವಣಿಗೆಗಳು ರಾಜ್ಯ ಸರಕಾರದ ಕುಮ್ಮಕ್ಕಿನಿಂದಲೇ ನಡೆಯುತ್ತಿವೆ..

ಬೆಂಗಳೂರು: ದೇವಸ್ಥಾನ, ಮಸೀದಿ, ಚರ್ಚ್‌‌ಗಳಲ್ಲಿನ ಧ್ವನಿ ವರ್ಧಕಗಳಿಂದ ಯಾರಿಗೆ ತೊಂದರೆ ಆಗಿದೆ? ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ವರ್ಷ ಎಂದು ಧ್ವನಿ ವರ್ಧಕ ವಿಷಯದಲ್ಲಿ ಕ್ಯಾತೆ ತೆಗೆಯುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಇವೆಲ್ಲ ಸಮಾಜದ ಶಾಂತಿ, ಸಾಮರಸ್ಯ ಹಾಳುಮಾಡುವ ಪ್ರಯತ್ನಗಳು ಎಂದು ಕಿಡಿಕಾರಿದ್ದಾರೆ.

ಇಂಥಾ ಘಟನೆಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲ್ಲ. ರಾಜ್ಯಕ್ಕೆ ಯಾವ ಬಂಡವಾಳ ಹೂಡಿಕೆದಾರರು ಬರಲ್ಲ, ಉದ್ಯೋಗ ಸೃಷ್ಟಿಯಾಗಲ್ಲ, ನಿರುದ್ಯೋಗ ಸಮಸ್ಯೆ ಹೋಗಲ್ಲ, ರಾಜ್ಯದ ಜಿಡಿಪಿ ಬೆಳವಣಿಗೆಯಾಗಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ಎಲ್ಲ ಬೆಳವಣಿಗೆಗಳು ರಾಜ್ಯ ಸರಕಾರದ ಕುಮ್ಮಕ್ಕಿನಿಂದಲೇ ನಡೆಯುತ್ತಿವೆ. ಮುಖ್ಯಮಂತ್ರಿಗಳು ಮೌನವಾಗಿರುವುದಲ್ಲ, ಎಲ್ಲದಕ್ಕೂ ಕುಮ್ಮಕ್ಕು ನೀಡುತ್ತಿದ್ದಾರೆ. ಆರ್.ಎಸ್.ಎಸ್ ಮತ್ತು ಭಜರಂಗದಳ ಸರಕಾರಕ್ಕೆ ಗೊತ್ತಿಲ್ಲದೆ ಇಷ್ಟೆಲ್ಲಾ ಮಾಡುತ್ತಾ? ಇದನ್ನು ಸರಕಾರ ಹತ್ತಿಕ್ಕಬೇಕು, ಸಮಾಜದ ಶಾಂತಿ ಕದಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಆಗ್ರಹಿಸಿದರು.

ಮಂಗಳೂರು : ಎಲ್ಲೆಡೆ ಕನ್ನಡ ಭಾಷೆಯನ್ನು ಪ್ರಧಾನವಾಗಿ ಜಾರಿಗೆ ತರುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ – Vishwanews24

Leave a Reply