ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ಕಾನೂನು : ಸುಪ್ರೀಂ ಕೋರ್ಟ್ – Vishwanews24
ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ಕಾನೂನು : ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆ ಮತ್ತು ಶಿಕ್ಷೆಯ ಅಮಾನತಿಗೆ ಸಂಬಂಧಿಸಿದ ವಿಷಯದ ಮೇಲೆ ಸಾಮಾನ್ಯ ಜನರಿಗೆ ಮತ್ತು ಜನಪ್ರತನಿಧಿಗಳಿಗೆ ಭಿನ್ನ ಕಾನೂನು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ವೇಳೆ ಕೋರ್ಟ್ ಈ ರೀತಿ ಹೇಳಿದೆ.
ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ. “ಒಬ್ಬ ಸಂಸದ ಮತ್ತು ವಿಧಾನಸಭೆಯ ಸದಸ್ಯರಿಗೆ ಶಿಕ್ಷೆಯನ್ನು ಅಮಾನತುಗೊಳಿಸಲು ವಿಭಿನ್ನ ನಿಯಮ ಇರುವಂತಿಲ್ಲ” ಎಂದು ನ್ಯಾಯಾಲಯ ಹೇಳಿದೆ.
ಫೈಝಲ್ ಚುನಾಯಿತ ಪ್ರತಿನಿಧಿಯಾಗಿದ್ದು, ಆತನ ಅಪರಾಧಕ್ಕೆ ತಡೆ ನೀಡದಿದ್ದಲ್ಲಿ, ಸ್ಥಾನ ಖಾಲಿಯಾಗಿ ಚುನಾವಣೆಗಳು ಬೊಕ್ಕಸಕ್ಕೆ ವೆಚ್ಚವಾಗಲಿದೆ ಎಂದು ಕೇರಳ ಹೈಕೋರ್ಟ್ ತನ್ನ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿದ ಸಂದರ್ಭದಲ್ಲಿ ಈ ಹೇಳಿಕೆ ಬಂದಿದೆ.
