ಜನರ ಆರೋಗ್ಯದ ಹಿತದೃಷ್ಠಿಯಿಂದ ಕರ್ನಾಟಕದಲ್ಲಿ ವೀಕೆಂಡ್, ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ : ಸಚಿವ ಅಶೋಕ್ -Vishwanews24

Featured, ರಾಜ್ಯ ನ್ಯೂಸ್

ಜನರ ಆರೋಗ್ಯದ ಹಿತದೃಷ್ಠಿಯಿಂದ ಕರ್ನಾಟಕದಲ್ಲಿ ವೀಕೆಂಡ್, ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ : ಸಚಿವ ಅಶೋಕ್ -Vishwanews24

ಬೆಂಗಳೂರು : ಜನರ ಆರೋಗ್ಯದ ಹಿತದೃಷ್ಠಿಯಿಂದ ಕರ್ನಾಟಕದಲ್ಲಿ ವೀಕೆಂಡ್, ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅದರ ಹೊರತಾಗಿ ಯಾರೋ ಒಬ್ಬರ ಲಾಭಕ್ಕಾಗಿ ನಿಯಮ ಬದಲಾಯಿಸೋದಕ್ಕೆ ಆಗುವುದಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಜನವರಿ 31ರ ಬಳಿಕ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಮುಂದುವರೆಸೋದಾ ಅಥವಾ ಬೇಡವಾ ಎನ್ನುವ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ ಎಂದರು.

ಮಂಗಳೂರು: ರಾಜ್ಯ ಸರ್ಕಾರ ಜನರ ಜೀವನದಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದು, ತಕ್ಷಣ ವಿಕೇಂಡ್ ಕರ್ಫ್ಯೂ ಹಿಂಪಡೆಯಬೇಕು : ಖಾದರ್ ಒತ್ತಾಯ -Vishwanews24

ಇನ್ನು ನಮಗೆ ಜನರ ಆರೋಗ್ಯ, ಪ್ರಾಣದ ರಕ್ಷಣೆ ಮುಖ್ಯವಾಗಿದೆ. ಈ ಕಾರಣದಿಂದಲೇ ವೀಕೆಂಡ್ ಹಾಗೂ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಇದು ನಮ್ಮ ಕರ್ತವ್ಯ ಕೂಡ ಆಗಿದ್ದು ಅದರ ಹೊರತಾಗಿ ಯಾರೋ ಒಬ್ಬರ ಲಾಭಕ್ಕಾಗಿ ನಿಯಮವನ್ನು ಬದಲಾಯಿಸೋದಕ್ಕೆ ಆಗೋದಿಲ್ಲ ಎಂದು ಹೇಳಿದ್ದಾರೆ.

Leave a Reply