ಜಾರಕಿಹೊಳಿ ಸಿಡಿ ಪ್ರಕರಣ : ಓರ್ವ ವಶಕ್ಕೆ; ವಿಚಾರಣೆ -Vishwanews24
ಜಾರಕಿಹೊಳಿ ಸಿಡಿ ಪ್ರಕರಣ : ಓರ್ವ ವಶಕ್ಕೆ; ವಿಚಾರಣೆ -Vishwanews24
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಸೌಮೇಂದ್ರ ಮುಖರ್ಜಿ ನೇತೃತ್ವದ ಎಸ್ಐಟಿ ತಂಡ ತನಿಖೆಯನ್ನು ಆರಂಭಿಸಿದ್ದು, ಮೊದಲ ದಿನವೇ ದಿನೇಶ್ ಕಲ್ಲಹಳ್ಳಿಗೆ ಸಿಡಿ ಕೊಟ್ಟಂತ ವ್ಯಕ್ತಿಯನ್ನು ಪತ್ತೆ ಹಚ್ಚಿರುವ ತಂಡ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶಿದ್ದು, ತನಿಖೆಯ ನೇತೃತ್ವವವನ್ನು ಸೌಮೇಂದ್ರ ಮುಖರ್ಜಿ ನೇತೃತ್ವದ ತಂಡಕ್ಕೆ ವಹಿಸಿತ್ತು.
ಇನ್ನು ಇಂದಿನಿಂದ ತನಿಖೆ ಆರಂಭಿಸಿರುವಂತ ಎಸ್ಐಟಿ ಅಧಿಕಾರಿಗಳು, ಮೊದಲ ದಿನವೇ ದಿನೇಶ್ ಕಲ್ಲಹಳ್ಳಿಗೆ ಸಿಡಿ ನೀಡಿದಂತ ಯಶವಂತಪುರದಲ್ಲಿದ್ದಂತ ವ್ಯಕ್ತಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ ಎನ್ನಲಾಗಿದೆ.
