ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

Featured, ಉಡುಪಿ

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ

ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಜುಲೈ 29ರಂದು ಉದ್ಘಾಟನೆಯಾಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಕಿದಿಯೂರು ಉದಯಕುಮಾರ್ ಶೆಟ್ಟಿ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 3.30ಕ್ಕೆ ಭದ್ರತಾ ಕೊಠಡಿ ಹಾಗೂ ಕ್ಯಾಶ್ ಕೌಂಟರ್ ಉದ್ಘಾಟನೆ ನಡೆಯಲಿದ್ದು, ಸಂಜೆ 4.30ಕ್ಕೆ ವೀರಭದ್ರ ಸಭಾಭವನದಲ್ಲಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ ಎಂದರು.

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಉಡುಪಿ ಶ್ಯಾಮಿಲಿ ಸಮೂಹ ಸಂಸ್ಥೆಯ ಸಂಸ್ಥಾಪಕ ಡಾ. ಜಿ. ಶಂಕರ್, ಬೆಂಗಳೂರು ಎಂ.ಆ‌ರ್.ಜಿ. ಗ್ರೂಪ್‌ನ ಡಾ. ಕೆ. ಪ್ರಕಾಶ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾ‌ರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸಂಸದ ಬ್ರಿಜೇಶ್ ಚೌಟ, ಮಾಜಿ ಸಂಸದ ಹಾಗೂ ಬಿಜೆಪಿ ನಿಕಟ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಹಿರಿಯ ಸಹಕಾರಿ ಧುರೀಣ ಟಿ. ಶಂಭು ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಆಸ್ಪೆನ್ ಇನ್‌ಫ್ರಾಸ್ಟ್ರಕ್ಚರ್ಸ್ ಮುಖ್ಯಸ್ಥ ಅಶೋಕ್ ಕುಮಾ‌ರ್ ಶೆಟ್ಟಿ, ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಜಿ.ಎಸ್. ಚಂದ್ರಶೇಖ‌ರ್, ಸದ್ಗುರು ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ, ಶಾಂತಾ ಇಲೆಕ್ಟಿಕಲ್ಸ್ ಪ್ರೈ.ಲಿ. ಆಡಳಿತ ನಿರ್ದೇಶಕ ಶ್ರೀಪತಿ ಭಟ್ ಉಚ್ಚಿಲ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.ಉದ್ಘಾಟನಾ ಪ್ರಯುಕ್ತ ವಿಶೇಷ ಸ್ಥಿರ ಠೇವಣಿ (ಎಫ್‌ಡಿ) ಯೋಜನೆ ಘೋಷಿಸಲಾಗಿದ್ದು, ಒಂದು ವರ್ಷಕ್ಕಿಂತ ಹೆಚ್ಚು ಹಾಗೂ ಎರಡು ವರ್ಷದೊಳಗಿನ ಠೇವಣಿಗಳಿಗೆ ಸೀಮಿತ ಅವಧಿಗೆ ಶೇ.11 ಬಡ್ಡಿದರ ನೀಡಲಾಗುವುದು.

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

90ರಿಂದ 180 ದಿನಗಳವರೆಗೆ ಶೇ.5, 181 ದಿನಗಳಿಂದ ಒಂದು ವರ್ಷದೊಳಗೆ ಶೇ.7.50, ಒಂದು ವರ್ಷದಿಂದ ಎರಡು ವರ್ಷದೊಳಗೆ ಶೇ.9 ಹಾಗೂ ಎರಡು ವರ್ಷದಿಂದ ಐದು ವರ್ಷದೊಳಗೆ ಶೇ.9.50 ಬಡ್ಡಿದರ ಲಭ್ಯವಿರಲಿದೆ ಎಂದು ಹೇಳಿದರು.

ರಾಷ್ಟ್ರೀಕೃತ ಬ್ಯಾಂಕ್‌ಗಳ ಮಾದರಿಯಲ್ಲಿ ವಿವಿಧ ಸಾಲ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಸಂಸ್ಥೆ ಕೇವಲ ಲಾಭದ ಉದ್ದೇಶದಿಂದ ಕಾರ್ಯನಿರ್ವಹಿಸುವುದಿಲ್ಲ. ಲಾಭದ ಒಂದು ಭಾಗವನ್ನು ವಿದ್ಯಾರ್ಥಿಗಳು ಹಾಗೂ ಅಶಕ್ತರ ಕಲ್ಯಾಣಕ್ಕಾಗಿ ಮೀಸಲಿಟ್ಟು ಸಮಾಜಮುಖಿ ಸೇವೆಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷೆ ಪ್ರಣೀತ ಶರದ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷಿತಾ, ನಿರ್ದೇಶಕರಾದ ಸುಧಾಕರ್ ಹೆಗ್ಡೆ ಹಾಗೂ ಉಮೇಶ್ ನಾಯರಿ ಉಪಸ್ಥಿತರಿದ್ದರು.

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

Leave a Reply