ಜೂ .5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ : ಹವಾಮಾನ ಇಲಾಖೆ ಮುನ್ಸೂಚನೆ – vishwanews24
ಜೂ.5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ : ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯಕ್ಕೆ ಜೂ.5 ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಈ ಬಾರಿ ಮುಂಗಾರು ಪ್ರವೇಶ ತಡ ಆಗಲಿದೆ ಎನ್ನಲಾಗಿತ್ತು. ಆದರೆ ತಡ ಆಗಿಲ್ಲ ಸರಿಯಾದ ಸಮಯಕ್ಕೆ ಮುಂಗಾರು ಪ್ರವೇಶಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:
ತ್ವಿಶಾ ಶರ್ಮಾ ಪ್ರಕರಣ: ಪ್ರಮುಖ ಸಾಕ್ಷಿಯ ಮೇಲೆ ಪತಿ ಸ್ನೇಹಿತರಿಂದ ಹಲ್ಲೆ – vishwanews24
ಇಂದಿನಿಂದ (ಜೂ.2) ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದೆ. ಗದಗ, ಮೈಸೂರು ಸೇರಿ ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂ.3 ರಂದು ಬೆಂಗಳೂರಿನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
