ಜೆಡಿಎಸ್‌ ಸ್ವಾಭಿಮಾನಿ ಕನ್ನಡಿಗರ ಪಕ್ಷ,  ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ : ಕುಮಾರಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಜೆಡಿಎಸ್‌ ಸ್ವಾಭಿಮಾನಿ ಕನ್ನಡಿಗರ ಪಕ್ಷ,  ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ : ಕುಮಾರಸ್ವಾಮಿ -Vishwanews24

ಜೆಡಿಎಸ್ ಪಕ್ಷವನ್ನು ಯಾವುದೇ ಪಕ್ಷಗಳ ಜೊತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ..

ನಾನು ಬದುಕಿರುವವರೆಗೂ ಜೆಡಿಎಸ್ ಪಕ್ಷವನ್ನು ಬೇರೆ ಪಕ್ಷದೊಂದಿಗೆ ವಿಲೀನ ಇಲ್ಲ..

ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ’ ಎಂಬ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಅವರ ಹೇಳಿಕೆ ಜೆಡಿಎಸ್‌ ಪಕ್ಷವು ಬಿಜೆಪಿಯಲ್ಲಿ ವಿಲೀನಗೊಳ್ಳುವುದೇ ಎಂಬ ಚರ್ಚೆಗೆ ನಾಂದಿ ಹಾಡಿದೆ.

ಎಚ್‌.ಡಿ.ಕುಮಾರಸ್ವಾಮಿ ಅವರು  ಈ ಸಾಧ್ಯತೆಯನ್ನು ಸ್ಪಷ್ಟವಾಗಿ ಅಲ್ಲಗಳೆದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಯಾವುದೇ ಪಕ್ಷಗಳ ಜೊತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ. ನಾನು ಬದುಕಿರುವವರೆಗೂ ಜೆಡಿಎಸ್ ಪಕ್ಷವನ್ನು ಬೇರೆ ಪಕ್ಷದೊಂದಿಗೆ ವಿಲೀನ ಇಲ್ಲ ಎಂದು ಹೇಳಿದರು.

ಕಳೆದ 10 ವರ್ಷಗಳಿಂದ ವಿರೋಧ ಪಕ್ಷದಲ್ಲಿ ಕೆಲಸ ಮಾಡಿದ್ದೇವೆ. ದೇವೇಗೌಡರು ಸಹ 60 ವರ್ಷದ ರಾಜಕಾರಣದಲ್ಲಿ ವೈಯಕ್ತಿಕವಾಗಿ ಹೋರಾಟ ಮಾಡಿ ಜೆಡಿಎಸ್ ಪಕ್ಷವನ್ನು ಕಟ್ಟಿದ್ದಾರೆ. ಅಧಿಕಾರ ಹಿಡಿಯಲು ಬೇರೆ ಪಕ್ಷದ ಜೊತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಇದೇ ವಿಚಾರ ಕುರಿತು ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ‘ಜೆಡಿಎಸ್‌ ಸ್ವಾಭಿಮಾನಿ ಕನ್ನಡಿಗರ ಪಕ್ಷ. ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಬಿಜೆಪಿ ಜತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ’ ಎಂದು ಹೇಳಿದ್ದಾರೆ.

‘ಜೆಡಿಎಸ್‌ ಬಿಜೆಪಿಯ ‘ಬಿ ಟೀಂ’ ಎಂದು ಕಾಂಗ್ರೆಸ್‌ ಮುಖಂಡರು ಆರೋಪಿಸಿದ್ದರು. ಆ ಬಳಿಕ ನಮ್ಮ ಮನೆ ಬಾಗಿಲಿಗೆ ಬಂದು ಸಮ್ಮಿಶ್ರ ಸರ್ಕಾರ ಮಾಡಿದರು. ಕಾಂಗ್ರೆಸ್‌ ಆರೋಪಿಸುವಂತೆ ಒಳ ಒಪ್ಪಂದವೇನೂ ಇಲ್ಲ. ವಿಷಯಾಧಾರಿತ ಹೊಂದಾಣಿಕೆ ಮಾತ್ರ ಸಾಧ್ಯ’ ಎಂದು ತಿಳಿಸಿದ್ದಾರೆ.