ಜೆಡಿಎಸ್ ಮುಖಂಡ ಬಿ. ದೇವೇಂದ್ರಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ – Vishwanews24

Featured, ರಾಜ್ಯ ನ್ಯೂಸ್

ಜೆಡಿಎಸ್ ಮುಖಂಡ ಬಿ. ದೇವೇಂದ್ರಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ – Vishwanews24

ಬೆಂಗಳೂರು: ಜೆಡಿಎಸ್ ಮುಖಂಡ ಬಿ. ದೇವೇಂದ್ರಪ್ಪ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಈ ವೇಳೆ ಜೆಡಿಎಸ್ ಜಗಳೂರು ತಾಲೂಕು ಘಟಕದ ಅಧ್ಯಕ್ಷ ಕೆ. ಗುರುಸಿದ್ದಪ್ಪ, ಯುವ ಘಟಕದ ಅಧ್ಯಕ್ಷ ಕೃಷ್ಣ ಯಾದವ್, ಜಗಳೂರು ಬಿಜೆಪಿ ಅಧ್ಯಕ್ಷ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ರಾಜಣ್ಣ ಮತ್ತಿತರರು ಕಾಂಗ್ರೆಸ್ ಸೇರಿದರು.

ಕಾರ್ಯಾಧ್ಯಕ್ಷ ಸಲೀಂ ಅಹಮದ್, 2018 ರ ಚುನಾವಣೆಯಲ್ಲಿ ಜಗಳೂರಿನ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಚ್‌.ಪಿ. ರಾಜೇಶ್ ಉಪಸ್ಥಿತರಿದ್ದರು.

ಜಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ದೇವೇಂದ್ರಪ್ಪ ಅವರು ಪರಾಜಿತರಾಗಿದ್ದರು.

ಪರಿಶಿಷ್ಟ ವರ್ಗದ ಜನತೆಗೆ ವಿವಿಧ ಸೌಲಭ್ಯ ಒದಗಿಸಲು ವಿಶೇಷ ಅಭಿಯಾನ – Vishwanews24