ಟೂಲ್‌ ಕಿಟ್‌ ಪ್ರಕರಣ : ನಿಖಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ -Vishwanews24

Featured, ರಾಷ್ಟ್ರ ನ್ಯೂಸ್

ಟೂಲ್‌ ಕಿಟ್‌ ಪ್ರಕರಣ : ನಿಖಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ -Vishwanews24

ನವದೆಹಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ‘ಟೂಲ್‌ ಕಿಟ್‌‘ ಹಂಚಿದ ಪ್ರಕರಣದ ಸಹ ಆರೋಪಿ ನಿಕಿತಾ ಜೇಕಬ್‌‌ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡಲು ದೆಹಲಿಯ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಪೊಲೀಸರಿಗೆ ಒಂದು ವಾರ ಕಾಲಾವಕಾಶ ನೀಡಿದೆ.

ಬಾರ್ಕೂರು: ಆರ್‌ಟಿಐ ಕಾರ್ಯಕರ್ತ ಹಲ್ಲೆ ಪ್ರಕರಣ : ಆರೋಪಗಳನ್ನು ಬಂಧಿಸದಿದ್ದರೆ ತೀವ್ರ ಪ್ರತಿಭಟನೆ : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ -Vishwanews24

ನಿಕಿತಾ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸುವ ವೇಳೆ, ‘ಜೇಕಬ್‌‌ ಅವರು ಸಲ್ಲಿಸಿರುವ ಮನವಿಗೆ ವಿವರವಾದ ಉತ್ತರ ನೀಡಲು ತನಿಖಾ ಸಂಸ್ಥೆಗೆ ಸಮಯ ಬೇಕಾಗುತ್ತದೆ‘ ಎಂದು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಮಾರ್ಚ್ 9ರವರೆಗೆ ಕಾಲಾವಕಾಶ ನೀಡಿ ಆದೇಶಿಸಿದರು. ಇದೇ ದಿನ, ಈ ಪ್ರಕರಣದ ಮತ್ತೊಬ್ಬ ಸಹ ಆರೋಪಿ ಶಾಂತನು ಮುಲುಕ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನೂ ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ.

ಸಂಸದ ಪ್ರತಾಪ್ ಸಿಂಹ ವಿರುದ್ದ ಶಿಲುಬೆಗಳನ್ನು ಹಿಡಿದು ಧರಣಿ ಸತ್ಯಾಗ್ರಹ ನಡೆಸಿದ ಕ್ರಿಶ್ಚಿಯನ್ ಪೊಲಿಟಿಕಲ್ ಲೀಡರ್ಸ್ ಫೋರಂನ ಕಾರ್ಯಕರ್ತರು -Vishwanews24

ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ನಡೆದ ವಿಚಾರಣೆ ವೇಳೆ, ಜೇಕಬ್‌ ಪರವಾಗಿ ಹಾಜರಾದ ಹಿರಿಯ ವಕೀಲೆ ರೆಬೆಕಾ ಜಾನ್, ‘ನಾನು ಇಲ್ಲಿ ಜೇಕಬ್‌ ಪರ ವಾದ ಮಾಡುತ್ತಿದ್ದೇನೆಯೇ ಹೊರತು ಶಾಂತನು ಮುಲುಕ್‌ ಪರ ಅಲ್ಲ‘ ಎಂದು ಸ್ಪಷ್ಟಪಡಿಸಿದರು.

ನ್ಯಾಯಾಲಯ, ಮಾರ್ಚ್‌ 9ರಂದು ರೆಬೆಕಾ ಅವರು ತಮ್ಮ ವಾದ ಮಂಡಿಸಬಹುದು ಎಂದು ಹೇಳಿತು. ಹಾಗೆಯೇ, ಜೇಕಬ್‌ ನಿರೀಕ್ಷಣಾ ಜಾಮೀನು ಅರ್ಜಿ ಕುರಿತು ಪೊಲೀಸರು ನ್ಯಾಯಾಲಯಕ್ಕೆ ನೀಡುವ ಪ್ರತಿಕ್ರಿಯೆಯ ಒಂದು ಪ್ರತಿಯನ್ನು, ಅವರ ಪರ ವಕೀಲರಿಗೆ ನೀಡುವಂತೆ ನ್ಯಾಯಾಲಯ ನಿರ್ದೇಶನ ನೀಡಿತು.

ಪುತ್ತೂರು: ಮಹಿಳಾ ಎಸ್.ಐ ಮೇಲೆ ಹಲ್ಲೆ ಪ್ರಕರಣ ; ಇಬ್ಬರು ಸಹೋದರಿಯರ ಬಂಧನ -Vishwanews24