ಡಿಸೆಂಬರ್ 8 ಭಾರತ್ ಬಂದ್ ‌: ರೈತ ಸಂಘಟನೆಗಳ ಕರೆಗೆ ಕಾಂಗ್ರೆಸ್ ಬೆಂಬಲ -Vishwanews24

Featured, ರಾಷ್ಟ್ರ ನ್ಯೂಸ್

ಡಿಸೆಂಬರ್ 8 ಭಾರತ್ ಬಂದ್ ‌: ರೈತ ಸಂಘಟನೆಗಳ ಕರೆಗೆ ಕಾಂಗ್ರೆಸ್ ಬೆಂಬಲ 

ಹೊಸ ದಿಲ್ಲಿ: ಡಿಸೆಂಬರ್ 8 ಮಂಗಳವಾರದಂದು ರೈತ ಸಂಘಟನೆಗಳು ಕರೆ ನೀಡಿರುವ ಭಾರತ್‌ ಬಂದ್‌ಗೆ ಕಾಂಗ್ರೆಸ್ ಪಕ್ಷ ಬೆಂಬಲ ಸೂಚಿಸಿದೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಖಂಡಿಸಿ ರೈತ ಸಂಘಟನೆಗಳು ಬಂದ್ ಕರೆ ನೀಡಿದ್ದು, ಈ ಬಂದ್‌ ಕರೆಗೆ ತಮ್ಮ ಬೆಂಬಲವಿದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಕುರಿತು ಹೊಸ ದಿಲ್ಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸೆಂಬರ್ 8 ಮಂಗಳವಾರದಂದು ರೈತ ಸಂಘಟನೆಗಳು ಭಾರತ್ ಬಂದ್ ಕರೆ ನೀಡಿವೆ. ನಾವು ಈ ಬಂದ್‌ಗೆ ಬೆಂಬಲ ಸೂಚಿಸುತ್ತೇವೆ ಎಂದಿದ್ದಾರೆ. ರೈತರ ಪರವಾಗ ನಾವು ಧರಣಿ ಸತ್ಯಾಗ್ರಹ ನಡೆಸೋದಾಗಿ ಹೇಳಿದ್ದಾರೆ. ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ಧಾರೆ.

ಕಾಂಗ್ರೆಸ್ ವಕ್ತಾರ ಪವನ್ ಖೇರಾ ಕೂಡಾ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ಪಕ್ಷ ಬಂದ್‌ಗೆ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ. ರಾಹುಲ್ ಗಾಂಧಿ ಅವರು ರೈತರ ಪರವಾಗಿದ್ದು, ರೈತರಿಗೆ ರಾಹುಲ್ ತಮ್ಮ ಬೆಂಬಲ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಕೂಡಾ ನಮ್ಮ ಪಕ್ಷದ ಕಚೇರಿ ಬಳಿ ಪ್ರತಿಭಟನೆಗಳನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.

ಭಾರತೀಯ ಪ್ರವಾಸಿ ಸಾರಿಗೆ ಸಂಘ ಕೂಡಾ ಡಿಸೆಂಬರ್ 8ರ ಭಾರತ್ ಬಂದ್‌ ಕರೆಗೆ ತಮ್ಮ ಬೆಂಬಲ ಸೂಚಿಸಿದೆ. ದೇಶದೆಲ್ಲೆಯ 51 ಸಾರಿಗೆ ಸಂಘಗಳು ಬಂದ್‌ಗೆ ಬೆಂಬಲ ಸೂಚಿಸಿದ್ದು, ಪ್ರತಿಭಟನೆಗೆ ತೆರಳುವ ರೈತರನ್ನು ಒಂದೆಡೆಯಿಂದ ಮತ್ತೊಂದೆಡೆಗೆ ಸಾಗಿಸುವ ಕೆಲಸ ಮಾಡೋದಾಗಿ ಸಂಘಟನೆ ಘೋಷಿಸಿದೆ.