ಢಾಕಾ: ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಭೇಟಿ ; ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥನೆ -Vishwanews24
ಢಾಕಾ: ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಭೇಟಿ ; ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥನೆ -Vishwanews24
ಢಾಕಾ: ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಂಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದ ಪುರಾತಣವಾದ ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಬಾಂಗ್ಲಾದೇಶ ಪ್ರವಾಸದ ಎರಡನೇ ದಿನವಾದ ಇಂದು ಮೋದಿ ಬಾಂಗ್ಲಾದ ಸತ್ಖಿರಾ ಜಿಲ್ಲೆಯಲ್ಲಿರುವ ಅತ್ಯಂತ ಪುರಾಣ ಪ್ರಸಿದ್ಧ ಜೆಶೋರೇಶ್ವರಿ ಕಾಳಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಕಾಳಿ ದೇವಾಲಯವು ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಗಡಿ ಪ್ರದೇಶದವಾದ ಈಶ್ವರಿಪುರ ಗ್ರಾಮದಲ್ಲಿದ್ದು, ಇಲ್ಲಿ ಭಾರತ ಹಾಗೂ ಬಾಂಗ್ಲಾದೇಶದ ಎರಡು ಕಡೆಯ ಜನರು ಪೂಜೆ ಸಲ್ಲಿಸುತ್ತಾರೆ.
Bangladesh: Prime Minister Narendra Modi offers prayers at Jeshoreshwari Kali Temple in Ishwaripur, Satkhira district.
This is the second day of the PM's two-day visit to the country. pic.twitter.com/enEYPZvG6O
— ANI (@ANI) March 27, 2021
ಮೋದಿ ಮಾಸ್ಕ್ ಧರಿಸಿಕೊಂಡು ದೇವಾಲಯಕ್ಕೆ ಭೇಟಿಕೊಟ್ಟು ಭಕ್ತಿಯಿಂದ ಪೂಜೆ ಸಲ್ಲಿಸಿ ನಂತರ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಪುರಾಣ ಪ್ರಸಿದ್ಧ ಕಾಳಿ ದೇವಾಲಯಕ್ಕೆ ಭೇಟಿ ನೀಡಿ ಕಾಳಿಯೊಂದಿಗೆ ವಿಶ್ವಕ್ಕೆ ಅಂಟಿಕೊಂಡಿರುವ ಕೊರೊನಾ ಸೋಂಕಿನಿಂದ ಬೇಗ ಮುಕ್ತಿಕೊಡುವಂತೆ ಬೇಡಿಕೊಂಡಿದ್ದೇನೆ ಎಂದರು.
ಇದನ್ನೂ ಓದಿ : ಉಡುಪಿ: ಶ್ರೀಕೃಷ್ಣ ಮಠದಲ್ಲಿ ಎ.13 ರಿಂದ 27ರ ವರೆಗೆ ರಾಮನವಮಿ- ಹನುಮಜಯಂತಿ ಉತ್ಸವ -Vishwanews24
