ತಜ್ಞರ ಸಭೆ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆ: ಸಿಎಂ ಬೊಮ್ಮಾಯಿ – Vishwanews24

Featured, ರಾಜ್ಯ ನ್ಯೂಸ್

ತಜ್ಞರ ಸಭೆ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆ: ಸಿಎಂ ಬೊಮ್ಮಾಯಿ – Vishwanews24

ನವದೆಹಲಿ: ತಜ್ಞರೊಂದಿಗೆ ಸಭೆ ನಡೆಸಿದ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿತರ ವೈದ್ಯಕೀಯ ವರದಿ ಇಂದು ಸರ್ಕಾರದ ಕೈ ಸೇರಲಿದ್ದು, ವರದಿ ಬಳಿಕ ಸೋಂಕಿತರ ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯ ಆರಂಭಿಸಲಾಗುತ್ತದೆ. ಇದಕ್ಕಾಗಿ ಈಗಾಗಲೇ ಕ್ರಮಗಳ ಕೈಗೊಳ್ಳಲಾಗಿದೆ. ತಜ್ಞರೊಂದಿಗೆ ಇಂದು ಮಧ್ಯಾಹ್ನ 1 ಗಂಟೆಗೆ ಸಭೆ ನಡೆಸಲಿದ್ದು, ಸಭೆ ಬಳಿಕ ಹೊಸ ಮಾರ್ಗಸೂಚಿಯನ್ನು ಸಿದ್ಧ ಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈಗಾಗಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಸಚಿವರು ವೈದ್ಯಕೀಯ ವರದಿ ಹಾಗೂ ಹೊಸ ಮಾರ್ಗಸೂಚಿಗಳೊಂದಿಗೆ ತಮ್ಮ ಬಳಿ ಬರುವಂತೆ ಹೇಳಿದ್ದಾರೆಂದು ತಿಳಿಸಿದ್ದಾರೆ.

ಈಗಾಗಲೇ ರಾಜ್ಯದ ಆರೋಗ್ಯ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ವೈದ್ಯಕೀಯ ವರದಿ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಇಂದು ಮಧ್ಯಾಹ್ನ ಆರೋಗ್ಯ ಸಚಿವರು ಹಾಗೂ ತಜ್ಞರೊಂದಿಗೆ ತುರ್ತು ಸಭೆ ಕರೆಯಲಾಗಿದೆ ಎಂದಿದ್ದಾರೆ.

ಕುಂದಾಪುರ: ದೇಶ ವಿರೋಧಿ ಹಾಗೂ ಗೋಹತ್ಯೆಯಂತಹ ದುಷ್ಕೃತ್ಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ : ಸಚಿವ ಕೋಟ – Vishwanews24