ತಮಿಳುನಾಡಿನಲ್ಲಿ ಬಿಜೆಪಿ ಬೇರು ಗಟ್ಟಿಯಾಗಲಿ, ಅಣ್ಣಾಮಲೈ ತಮಿಳುನಾಡಿನ ಅಣ್ಣ ಆಗಿ ಮೂಡಿಬರಲಿ: ಸುನಿಲ್ ಕುಮಾರ್ -Vishwanews24
ತಮಿಳುನಾಡಿನಲ್ಲಿ ಬಿಜೆಪಿ ಬೇರು ಗಟ್ಟಿಯಾಗಲಿ, ಅಣ್ಣಾಮಲೈ ತಮಿಳುನಾಡಿನ ಅಣ್ಣ ಆಗಿ ಮೂಡಿಬರಲಿ: ಸುನಿಲ್ ಕುಮಾರ್ -Vishwanews24
ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ , ಬಿಜೆಪಿ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು, ಉಡುಪಿ ಜಿಲ್ಲೆಯ ರಾಜಕಾರಣಿಗಳು ಮಾಜಿ ಪೊಲೀಸ್ ಕಾಪ್ ಗೆ ಶುಭ ಹಾರೈಸಿದ್ದಾರೆ.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿ, ಅಣ್ಣಾಮಲೈ ಒಬ್ಬ ದಕ್ಷ ಪೊಲೀಸ್ ಅಧಿಕಾರಿಯಾಗಿದ್ದವರು. ಅವರು ಕಾರ್ಕಳದ ಎಎಸ್ಪಿಯಾಗಿ ಕರ್ತವ್ಯ ಆರಂಭಿಸಿದ್ದರು.
ಅಣ್ಣಾಮಲೈ ಬಿಜೆಪಿ ಸೇರಿದ್ದು ಬಹಳ ಸಂತೋಷವಾಗಿದೆ. ಕರ್ತವ್ಯದಲ್ಲೇ ಜನಪರವಾಗಿ ಯೋಚನೆ ಮಾಡಿದ ವ್ಯಕ್ತಿ ಅವರು. ಅಣ್ಣಾಮಲೈ ಅವರ ರಾಜಕೀಯ ಜೀವನ ಉಜ್ವಲವಾಗಲಿ.
ತಮಿಳುನಾಡಿನಲ್ಲಿ ಬಿಜೆಪಿ ಬೇರು ಗಟ್ಟಿಯಾಗಲಿ. ಅಣ್ಣಾಮಲೈ ಯವರು ತಮಿಳುನಾಡಿನ ಅಣ್ಣ ಆಗಿ ಮೂಡಿಬರಲಿ ಎಂದು ಶುಭ ಹಾರೈಸಿದ್ದಾರೆ.
