ತಿರುಪತಿ ಟಿಕೆಟ್ ಬುಕ್ಕಿಂಗ್ ಮಾಡೋ ಮುನ್ನ ಎಚ್ಚರ ! ದರ್ಶನದ ನಕಲಿ ಟಿಕೆಟ್ ದುಬಾರಿ ಬೆಲೆಗೆ ಮಾರಾಟ , 7 ಜನರ ಬಂಧನ – Vishwanews24
ತಿರುಪತಿ ಟಿಕೆಟ್ ಬುಕ್ಕಿಂಗ್ ಮಾಡೋ ಮುನ್ನ ಎಚ್ಚರ ! ದರ್ಶನದ ನಕಲಿ ಟಿಕೆಟ್ ದುಬಾರಿ ಬೆಲೆಗೆ ಮಾರಾಟ , 7 ಜನರ ಬಂಧನ – Vishwanews24
ತಿರುಪತಿ : ತಿರುಮಲ ಶ್ರೀವಾರಿ ದರ್ಶನದ ನಕಲಿ ಟಿಕೆಟ್ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಎರಡು ಗ್ಯಾಂಗ್ಗಳ 7 ಜನರನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.
ವಿಶೇಷ ದರ್ಶನದ ನಕಲಿ ಟಿಕೆಟ್ ಅನ್ನು ದುಬಾರಿ ಬೆಲೆಗೆ ಮಾರಾಟ ಮಾಡಿ, ಭಕ್ತರನ್ನು ವಂಚಿಸುತ್ತಿದ್ದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.
ಈ ಆರೋಪದ ಮೇರೆಗೆ ಟಿಟಿಡಿ ಅಧಿಕಾರಿಗಳು ಎರಡು ಗ್ಯಾಂಗ್ಗಳ ೭ ಜನರನ್ನು ಸೋಮವಾರ ತಿರುಮಲ ಪೊಲೀಸ್ ಠಾಣೆಯಲ್ಲಿ ಬಂದಿಸಿದ್ದಾರೆ. ಬಂಧಿತರನ್ನು ಎಸ್ಪಿಎಫ್ ಕಾನ್ಸ್ಟೇಬಲ್ ಎಂ ಕೃಷ್ಣರಾವ್, ತಿರುಮಲ ವಿಶೇಷ ಪ್ರವೇಶ ಕೌಂಟರ್ನ ನಾಗೇಂದ್ರ, ಚೆಂಗಾರೆಡ್ಡಿ, ದೇವೇಂದ್ರ ಪ್ರಸಾದ್ ಮತ್ತು ವೆಂಕಟ್ ಲಡ್ಡು ಮಾರಾಟ ಕೌಂಟರ್ ಸಿಬ್ಬಂದಿ ಅರುಣ್ ರಾಜ್, ಟ್ರಾವೆಲ್ ಏಜೆನ್ಸಿ ಸಿಬ್ಬಂದಿ ಬಾಲಾಜಿ ಎಂದು ಗುರುತಿಸಲಾಗಿದೆ.
ಕೊರೊನಾ-ಒಮಿಕ್ರಾನ್ ಭೀತಿ : ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ.. Vishwanewsws24
ಈ ಆರೋಪಿಗಳು ಮಧ್ಯಪ್ರದೇಶದಿಂದ ಬಂದ ಭಕ್ತರು ಮಧ್ಯವರ್ತಿಯ ಬಳಿ 300 ರೂ. ಮೌಲ್ಯದ ಟಿಕೆಟ್ಗೆ ತಲಾ 3,300 ರೂ. ತೆತ್ತು ಖರೀದಿಸಿ, ದೇವರ ದರ್ಶನಕ್ಕೆ ಮುಂದಾಗಿದ್ದರು. ಪ್ರವೇಶದ್ವಾರದ ಬಳಿ ಭಕ್ತರ ಬಳಿ ಇದ್ದ ಟಿಕೆಟ್ ಪರಿಶೀಲಿಸಿದಾಗ ಅದು ನಕಲಿ ಎಂಬುದು ಸ್ಪಷ್ಟವಾಗಿತ್ತು.
ಹೊಸ ವರ್ಷದಂದು ಶ್ರೀ ವೆಂಕಟೇಶ್ವರನ ದರ್ಶನಕ್ಕೆ ಮಧ್ಯಪ್ರದೇಶದಿಂದ ಬಂದಿದ್ದ ಕುಟುಂಬದವರು 300 ರೂ. ಮೌಲ್ಯದ ವಿಶೇಷ ದರ್ಶನದ ಟಿಕೆಟ್ (ಶ್ರೀವಾರಿ ದರ್ಶನದ ನಕಲಿ ಟಿಕೆಟ್) ಅನ್ನು ತಲಾ 7 ಸಾವಿರ ರೂ.ಗೆ ಮಾರಾಟ ಮಾಡಿದ್ದರು. ಮೊದಲು ಪೇದೆ ಕೃಷ್ಣರಾವ್ ನೇತೃತ್ವದಲ್ಲಿ ನಕಲಿ ಟಿಕೆಟ್ ಮಾರಾಟ ನಡೆಯುತ್ತಿತ್ತು. ಬಳಿಕ ಪ್ರವೇಶ ಕೌಂಟರ್ನಲ್ಲಿ ಇರುತ್ತಿದ್ದ ಇದೇ ಗ್ಯಾಂಗ್ನ ನಾಗೇಂದ್ರ, ಸ್ಕಾನ್ ಮಾಡದೇ ನಕಲಿ ಟಿಕೆಟ್ ಪಡೆದವರನ್ನು ಒಳಕ್ಕೆ ಬಿಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಕೊರೊನಾ-ಒಮಿಕ್ರಾನ್ ಭೀತಿ : ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ.. Vishwanewsws24
