ತುಳುನಾಡಿನ ಹೆಮ್ಮೆಯ ಉದ್ಯಮಿ ಕೆ.ಪ್ರಕಾಶ್ ಶೆಟ್ಟಿ ಅವರ ಪ್ರಕಾಶಾಭಿನಂದನ ಕಾರ್ಯಕ್ರಮಕ್ಕೆ ಕ್ಷಣಗಣನೆ : ರಾಕಿಂಗ್ ಸ್ಟಾರ್ ಸೇರಿ ಹಲವು ಸ್ಟಾರ್ ನಟರ ಆಗಮನ- Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ತುಳುನಾಡಿನ ಹೆಮ್ಮೆಯ ಉದ್ಯಮಿ , ಅಪೂರ್ವ ಸಾಧಕ, ಕೊಡುಗೈ ದಾನಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಪ್ರಕಾಶ್ ಶೆಟ್ಟಿ ಅವರ ಪ್ರಕಾಶಾಭಿನಂದನ 60ರ ಸಂಭ್ರಮ ಇಂದು ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಅದ್ಧೂರಿಯಾಗಿ ನೆರವೇರಲಿದೆ.

ಈಗಾಗಲೇ ಭರದ ಸಿದ್ಧತೆಗಳು ನಡೆದಿದ್ದು, ಕಾರ್ಯಕ್ರಮದ ಉದ್ಘಾಟಕರಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಸರಿಯಾಗಿ ಕಾರ್ಯಕ್ರಮ ಆರಂಭಗೊಳ್ಳಲಿದೆ. ಈಗಾಗಲೇ ಪ್ರಕಾಶಾಭಿನಂದನೆಗೆ ಅಧ್ಧೂರಿ ವೇದಿಕೆ ಸಿದ್ಧವಾಗಿದ್ದು, ಪ್ರಕಾಶ್ ಶೆಟ್ಟಿಯವರ ಅಭಿಮಾನಿಗಳು ಕಾರ್ಯಕ್ರಮ ಆರಂಭಕ್ಕೆ ಎದುರು ನೋಡುತ್ತಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಪ್ರಮುಖ ಆಕರ್ಷಕರಾಗಿ ಚಲನಚಿತ್ರ ನಟ ಕ್ರೇಜಿಸ್ಟಾರ್ ರವಿಚಂದ್ರನ್, ಹಾಗೆಯೇ ಕೆಜಿಎಫ್ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್ ಭಾಗವಹಿಸಲಿದ್ದಾರೆ. ಈ ಮೂಲಕ ಕಾರ್ಯಕ್ರಮದ ಮೆರುಗನ್ನು ಈ ಇಬ್ಬರೂ ಸ್ಟಾರ್ ನಟರು ಹೆಚ್ಚಿಸಲಿದ್ದಾರೆ. ಜೊತೆಗೆ ವಿವಿಧ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳು ನೆರವೇರಲಿದೆ.

ಇನ್ನು ಸಂಗೀತ ದಿಗ್ಗಜ ಅರ್ಜುನ್ ಜನ್ಯ, ಹಾಗೆಯೇ ಖ್ಯಾತ ಸಿಂಗರ್ ವಿಜಯ್ ಪ್ರಕಾಶ್ ಅವರಿಂದ ಸಂಗೀತ ರಸಸಂಜೆ ನಡೆಯಲಿದೆ. ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಸದಾನಂದ ಗೌಡ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಾಕ್ಷಿಯಾಗಲಿದ್ದಾರೆ.