ದರ್ಶನ್ ಬಂಧನ : ವಿಚಾರಣೆಯ ನಂತರ ಹೆಚ್ಚಿನ ಮಾಹಿತಿ ನೀಡಲಾಗುವುದು : ಪೊಲೀಸ್ ಕಮಿಷನರ್ – vishwanews24
ದರ್ಶನ್ ಬಂಧನ : ವಿಚಾರಣೆಯ ನಂತರ ಹೆಚ್ಚಿನ ಮಾಹಿತಿ ನೀಡಲಾಗುವುದು : ಪೊಲೀಸ್ ಕಮಿಷನರ್
ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು ಪಶ್ಚಿಮ ವಿಭಾಗದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 9 ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ನಟರೊಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದ್ದು, ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ : ಮಲಯಾಳಂ ಚಿತ್ರ ನಟನ ವಿರುದ್ಧ ದೂರು ದಾಖಲು – vishwanews24
ಚಿತ್ರದುರ್ಗ ಮೂಲದ ರೇಣುಕಸ್ವಾಮಿ (33) ಕೊಲೆಯಾದ ವ್ಯಕ್ತಿ. ಪ್ರಕರಣ ಸಂಬಂಧ ಸುಮಾರು 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ತನಿಖೆಯ ಪ್ರಕ್ರಿಯೆಗಳು ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿಯನ್ನು ಈಗ ಕೊಡುವುದು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ವಿವರ ಹಾಗೂ ಪೂರಕ ಮಾಹಿತಿಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಮೇಸೆಜ್ ಮಾಡಿದ್ದರು ಎಂಬ ಆರೋಪದಲ್ಲಿ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರ ಹತ್ಯೆಯಾಗಿದೆ ಎಂಬುದು ಪ್ರಾಥಮಿಕ ತನಿಖೆಗಳಲ್ಲಿ ತಿಳಿದುಬಂದಿದೆ. ಸದ್ಯ ದರ್ಶನ್ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ಕೊಲೆ ಪ್ರಕರಣ : ದರ್ಶನ್ ಅರೆಸ್ಟ್ ಬೆನ್ನಲ್ಲೇ ನಟಿ ಪವಿತ್ರಾ ಗೌಡ ಪೊಲೀಸರ ವಶಕ್ಕೆ – vishwanews24
