ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ; ಕೇಂದ್ರ ಹಣಕಾಸು ಸಚಿವೆ ಜೊತೆ ಚರ್ಚಿಸಲಾಗುವುದು : ಸಿಎಂ ಬೊಮ್ಮಾಯಿ -Vishwanews24

Featured, ರಾಜ್ಯ ನ್ಯೂಸ್

ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ; ಕೇಂದ್ರ ಹಣಕಾಸು ಸಚಿವೆ ಜೊತೆ ಚರ್ಚಿಸಲಾಗುವುದು : ಸಿಎಂ ಬೊಮ್ಮಾಯಿ -Vishwanews24

ಹುಬ್ಬಳ್ಳಿ: ‘ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾದ ಕಾರಣ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಸೆ. 5 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಬರಲಿದ್ದು, ಅವರೊಂದಿಗೆ ಚರ್ಚಿಸಲಾಗುವುದು’ ಎಂದರು.

‘ಕೊರೊನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಕೇರಳ ಗಡಿಯಿಂದ ರಾಜ್ಯಕ್ಕೆ ಬರುವಾಗ ಕೆಲವರು ಸುಳ್ಳು ಕೋವಿಡ್ ನೆಗಟಿವ್ ವರದಿ ಪಡೆದು ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಎಲ್ಲರನ್ನೂ ಪರೀಕ್ಷಿಸಿ ರಾಜ್ಯದ ಒಳಗೆ ಬಿಡಲಾಗುತ್ತಿದೆ. ನಿಯಮ ಮೀರಿದವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದರು.