ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ :ಹೆಚ್.ಡಿ.ದೇವೇಗೌಡ -Vishwanews24
ನವದೆಹಲಿ: ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಬಿಜೆಪಿ ವಿರೋಧಿಸುವವರ ವಿರುದ್ದ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ.ಇದು ಖಂಡಿತಾ ಒಳ್ಳೆಯ ಬೆಳವಣಿಗೆಯಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ತಮ್ಮನ್ನು ಭೇಟಿ ಮಾಡಲು ಬಂದ ಸಂಸದ ಡಿ.ಕೆ.ಸುರೇಶ್ ಜೊತೆ ಕೆಲ ಹೊತ್ತು ಸಮಾಲೋಚನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ , ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ. ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣ ಹೊಸದೇನಲ್ಲ. ಕಳೆದ ಐದು ವರ್ಷದಿಂದ ಬಿಜೆಪಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದನ್ನು ನಾನು ಹೇಳುವ ಅಗತ್ಯವಿಲ್ಲ. ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು ಎಂದರು.
ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡುವ ಉದ್ದೇಶದಿಂದ ದೆಹಲಿಗೆ ಬಂದಿದ್ದೆ. ಆದರೆ ಎರಡು ದಿನ ಮೊದಲೇ ಅನುಮತಿ ಪಡೆಯಬೇಕೆಂದು ಜೈಲು ಅಧಿಕಾರಿಗಳು ಹೇಳಿದ ಕಾರಣ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದರು.
