ದೈವಕ್ಕೆ ಅವಮಾನ ಮಾಡಿದ ಆರೋಪ;  ಕ್ಷಮೆ ಕೇಳಿದ ರಣವೀರ್ ಸಿಂಗ್ – vishwanews24

Featured, ರಾಷ್ಟ್ರ ನ್ಯೂಸ್

ದೈವಕ್ಕೆ ಅವಮಾನ ಮಾಡಿದ ಆರೋಪ;  ಕ್ಷಮೆ ಕೇಳಿದ ರಣವೀರ್ ಸಿಂಗ್

ನಟ ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರವನ್ನು ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳೋ ಭರದಲ್ಲಿ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದರು. ಇಲ್ಲಿನ ಸಂಸ್ಕೃತಿಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ರಣವೀರ್ ಸಿಂಗ್ ವಿರುದ್ಧ ಅನೇಕರು ಪೋಸ್ಟ್​ಗಳನ್ನು ಮಾಡಿದ್ದರು. ಈ ವಿಷಯದಲ್ಲಿ ರಣವೀರ್ ಸಿಂಗ್ ಬೇಷರತ್ ಕ್ಷಮೆ ಕೇಳಿದ್ದಾರೆ. ಈ ಮೂಲಕ ವಿವಾದಕ್ಕೆ ಕೊನೆ ಹಾಡುವ ಪ್ರಯತ್ನ ಮಾಡಿದ್ದಾರೆ.

ರಣವೀರ್ ಅವರು ನಡೆದುಕೊಂಡ ರೀತಿಗೆ ಸಾಕಷ್ಟು ಟೀಕೆಗಳು ಕೇಳಿ ಬಂದವು. ಈಗ ರಣವೀರ್ ಅವರು ಈ ವಿಷಯವಾಗಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಕ್ಷಮೆ ಕೇಳಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ‘ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಮುಖ್ಯ ಉದ್ದೇಶವಾಗಿತ್ತು. ಆ ದೃಶ್ಯವನ್ನು ಮಾಡಲು ಎಷ್ಟು ಶ್ರಮ ಬೇಕು ಎಂಬುದು ನನಗೆ ತಿಳಿದಿದೆ. ಹೀಗಾಗಿ ಅವರ ಬಗ್ಗೆ ನನಗೆ ಮೆಚ್ಚುಗೆ ಇದೆ’ ಎಂದಿದ್ದಾರೆ ರಣವೀರ್ ಸಿಂಗ್.

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ ; ಇಬ್ಬರ ಬಂಧನ – vishwanews24

‘ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಮತ್ತು ನಂಬಿಕೆಯನ್ನು ನಾನು ಯಾವಾಗಲೂ ಆಳವಾಗಿ ಗೌರವಿಸುತ್ತೇನೆ. ನಾನು ಯಾರದ್ದಾದರೂ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ’ ಎಂದು ರಣವೀರ್ ಬರೆದುಕೊಂಡಿದ್ದಾರೆ.

ರಣವೀರ್ ಸಿಂಗ್ ಹಾಗೂ ರಿಷಬ್ ಶೆಟ್ಟಿ ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದರು. ಈ ವೇಳೆ ರಣವೀರ್ ಸಿಂಗ್ ಅವರು ರಿಷಬ್​ ನಟನೆಯ ಕಾಂತಾರ ಚಿತ್ರವನ್ನು ಹೊಗಳಿದರು. ‘ದೈವ’ ಎನ್ನುವ ಬದಲು ‘ದೆವ್ವ’ ಎಂದರು. ಇಷ್ಟೇ ಅಲ್ಲ, ರಿಷಬ್ ಅವರು ದೈವವನ್ನು ಅನುಕರಿಸಿದಂತೆ ತಾವೂ ಅನುಕರಿಸಲು ಹೋದರು. ಇದು ಹಾಸ್ಯಾಸ್ಪದ ಎನಿಸಿತು. ರಣವೀರ್ ಓರ್ವ ಜೋಕರ್ ರೀತಿ ಕಾಣಿಸಿದರು.

ಮಂಗಳೂರು: ದ್ವಿಚಕ್ರ ವಾಹನ ಕಳವು ಪ್ರಕರಣ; ಇಬ್ಬರು ಅಂತಾರಾಜ್ಯ ಆರೋಪಿಗಳ ಬಂಧನ – vishwanews24

Leave a Reply