ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

Featured, ಉಡುಪಿ, ದಕ್ಷಿಣ ಕನ್ನಡ

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ

ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ ಮೀಲಾದುನ್ನೆಬಿ ಆಚರಿಸಲಾಗುತ್ತಿದೆ. ಹಾಗಾಗಿ ಸರಕಾರಿ ಸಾರ್ವತ್ರಿಕ ರಜೆಯನ್ನು ಆ.25ರಂದು ನೀಡಲು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಜ್ ಮತ್ತು ವಕ್ಸ್ ಹಾಗೂ ದ.ಕ. ಉಸ್ತುವಾರಿ ಸಚಿವ ಯು.ಟಿ.ಖಾದರ್ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಈಗಾಗಲೆ ರಾಜ್ಯ ಸರಕಾರವು ಮೀಲಾದುನ್ನೆಬಿ ಸಾರ್ವತ್ರಿಕ ರಜೆಯನ್ನು ಆ.26ರಂದು ನಿಗದಿಪಡಿಸಿತ್ತು. ಆದರೆ ಇಸ್ಲಾಮಿಕ್ ತಿಂಗಳ ಆರಂಭದ ಚಂದ್ರದರ್ಶನದಲ್ಲಿ ವ್ಯತ್ಯಾಸವಾದ ಕಾರಣ ಪ್ರವಾದಿ ಮುಹಮ್ಮದ್ (ಸ)ರ ಜನ್ಮದಿನವನ್ನು ಆ.25ರಂದು ಆಚರಿಸಲು ಉಭಯ ಜಿಲ್ಲೆಯ ಖಾಝಿಗಳು ನಿರ್ಧರಿಸಿದ್ದಾರೆ.ಈ ನಿಟ್ಟಿನಲ್ಲಿ ಎರಡೂ ಜಿಲ್ಲೆಗಳ ಹಲವು ಮುಸ್ಲಿಂ ಸಂಘಟನೆಗಳ ಮುಖಂಡರು ಆ.26ರ ಸಾರ್ವತ್ರಿಕ ರಜಾ ದಿನವನ್ನು ಬದಲಾಯಿಸಿ ಆ.25ರಂದು ನೀಡಲು ಸಚಿವ ಖಾದರ್‌ಗೆ ಮನವಿ ಮಾಡಿದ್ದರು.

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಅದರಂತೆ ಸಚಿವ ಖಾದರ್ ಆ.25ರಂದು ರಜೆ ಘೋಷಿಸುವಂತೆ ಉಭಯ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

Leave a Reply