ದ.ಕ., ಉಡುಪಿ: ರಾತ್ರಿ ಕರ್ಫ್ಯೂ ಆದೇಶ ಯಥಾವತ್ತಾಗಿ ಜಾರಿಯಲಿರುತ್ತದೆ : ಜಿಲ್ಲಾಧಿಕಾರಿ – Vishwanews24
ದ.ಕ., ಉಡುಪಿ: ರಾತ್ರಿ ಕರ್ಫ್ಯೂ ಆದೇಶ ಯಥಾವತ್ತಾಗಿ ಜಾರಿಯಲಿರುತ್ತದೆ : ಜಿಲ್ಲಾಧಿಕಾರಿ – Vishwanews24
ಮಂಗಳೂರು/ಉಡುಪಿ: ಕೋವಿಡ್ ಪ್ರಕರಣಗಳ ಸಂಖ್ಯೆ ಹಾಗೂ ರೂಪಾಂತರಿತ ವೈರಸ್ ಒಮಿಕ್ರಾನ್ ಆತಂಕದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಡಿ.28 ರಿಂದ ಜ.7 ರವರೆಗೆ ಘೋಷಿಸಿರುವ ರಾತ್ರಿ ಕರ್ಫ್ಯೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಯಲಿರುತ್ತದೆ ಎಂದು ಮಂಗಳೂರು ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ ಮತ್ತು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ತಿಳಿಸಿದ್ದಾರೆ.
ಕರ್ಫ್ಯೂ ಹಿನ್ನಲೆಯಲ್ಲಿ ವಿಧಿಸಿರುವ ನಿರ್ಬಂಧಗಳನ್ನು ಉಭಯ ಜಿಲ್ಲೆಗಳಲ್ಲಿ ಯಥಾವತ್ತಾಗಿ ಜಾರಿಯಲ್ಲಿರುತ್ತದೆ. ಸರ್ಕಾರದ ಆದೇಶದಂತೆ ರಾತ್ರಿ ಕರ್ಪ್ಯೂ ಅವಧಿಯಲ್ಲಿ ಯಾವುದೇ ಸಮಾರಂಭ, ಕಾರ್ಯಕ್ರಮಗಳಿಗೆ ಅವಕಾಶಗಳು ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
2020ರ ಮಾರ್ಚ್ನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಲಾಗಿತ್ತು. ಆಗ ಲಾಕ್ಡೌನ್ ಸಡಿಲಿಕೆ ಸಮಯದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಅಂದಿನಿಂದ 2021ರ ನವೆಂಬರ್ ಮೊದಲ ವಾರದವರೆಗೂ ಬಹುತೇಕ ದಿನಗಳಲ್ಲಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಆದೇಶ ಜಾರಿಯಲ್ಲಿತ್ತು. ಒಂದೂವರೆ ತಿಂಗಳಲ್ಲೇ ಮತ್ತೆ ರಾತ್ರಿ ಕರ್ಫ್ಯೂ ಆದೇಶ ಜಾರಿಗೆ ಬಂದಂತಾಗಿದೆ.
ನೋಂದಣಿ ಆರಂಭ: ಪ್ರಧಾನಿ ಜತೆ ‘ಪರೀಕ್ಷಾ ಪೇ ಚರ್ಚಾ’ದಲ್ಲಿ ಭಾಗವಹಿಸುವ ಆಸಕ್ತರಿಗೆ ಇಲ್ಲಿದೆ ಮಾಹಿತಿ.. Vishwanews24
