ಧರ್ಮಸ್ಥಳ : ನಾಳೆ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 54ನೇ ವರ್ಧಂತ್ಯುತ್ಸವ – Vishwanews24

Featured, ದಕ್ಷಿಣ ಕನ್ನಡ

ಧರ್ಮಸ್ಥಳ : ನಾಳೆ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 54ನೇ ವರ್ಧಂತ್ಯುತ್ಸವ – Vishwanews24

ಧರ್ಮಸ್ಥಳ: ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 54ನೇ ವರ್ಧಂತಿ ಅಕ್ಟೋಬರ್ 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೋವಿಡ್ ನಿಯಮಗಳೊಂದಿಗೆ ಸರಳವಾಗಿ ನಡೆಯಲಿದೆ.

ಅಕ್ಟೋಬರ್ 24ರಂದು ಬೆಳಿಗ್ಗೆ ಭಗವಾನ್‌ ಚಂದ್ರನಾಥ ಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಲಿದೆ.

ಪಟ್ಟಾಭಿಷೇಕದ ದಿನದಂದೇ ನಾಡಿನಾದ್ಯಂತ ಧಾರ್ಮಿಕ ಕ್ಷೇತ್ರಗಳ ಮುಖಂಡರು, ಜನಪ್ರತಿನಿಧಿಗಳು, ಗಣ್ಯರು, ಗ್ರಾಮಸ್ಥರು ಕ್ಷೇತ್ರಕ್ಕೆ ಆಗಮಿಸಿ ಡಾ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.

ಡಾ ಡಿ ವೀರೇಂದ್ರ ಹೆಗ್ಗಡೆಯವರು 1968ರ ಅಕ್ಟೋಬರ್ 24ರಂದು ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು. ಆಗ ಅವರು 29 ವರ್ಷದ ಯುವಕರಾಗಿದ್ದರು.

2012ರ ಅಕ್ಟೋಬರ್‌ 24ರಂದು 50 ವರ್ಷಗಳ ಸೇವೆ ಪೂರೈಸಿದ್ದು, 2018ರ ಅಕ್ಟೋಬರ್‌ 24ರವರೆಗೆ ವೈವಿಧ್ಯಮ ಕಾರ್ಯಕ್ರಮಗಳೊಂದಿಗೆ ಸುವರ್ಣ ಮಹೋತ್ಸವ ಆಚರಿಸಲಾಯಿತು.

ಉಡುಪಿ : ಕಿತ್ತೂರು ಚೆನ್ನಮ್ಮ ಮಹಿಳೆಯರಿಗೆ ಮಾದರಿ – Vishwanews24

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಗವಾನ್‌ ಬಾಹುಬಲಿ ಮೂರ್ತಿ ಪ್ರತಿಷ್ಠಾಪನೆ, ಪ್ರತಿ 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ, ಮಹಾನಡಾವಳಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮ, ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ, ಸಿರಿ ಗ್ರಾಮೋದ್ಯೋಗ, ನೈರ್ಮಲ್ಯ ಯೋಜನೆಗಳು ಸೇರಿದಂತೆ ಹತ್ತುಹಲವು ಜನಪರ ಕಾರ್ಯಕ್ರಮಗಳ ನಿರ್ಮಾತೃರಾಗಿದ್ದಾರೆ ಹೆಗ್ಗಡೆ.