ಧರ್ಮಸ್ಥಳ ಬುರುಡೆ ಪ್ರಕರಣ : ಮುಸುಕುಧಾರಿ ಚಿನ್ನಯ್ಯ 10 ದಿನ ಎಸ್‌ಐಟಿ ಕಸ್ಟಡಿಗೆ – vishwanews24

Featured, ದಕ್ಷಿಣ ಕನ್ನಡ

ಧರ್ಮಸ್ಥಳ ಬುರುಡೆ ಪ್ರಕರಣ : ಮುಸುಕುಧಾರಿ ಚಿನ್ನಯ್ಯ 10 ದಿನ ಎಸ್‌ಐಟಿ ಕಸ್ಟಡಿಗೆ

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮುಸುಕುಧಾರಿಯಾಗಿ ಎಂಟ್ರಿಯಾಗಿದ್ದ ಸಾಕ್ಷಿಧಾರ ಚೆನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯ 10 ದಿನ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ.

ಸತತ ವಿಚಾರಣೆ ನಡೆಸಿದ್ದ ಎಸ್‌ಐಟಿ ಪೊಲೀಸರು ಇಂದು ಬೆಳಗ್ಗೆ ಚಿನ್ನಯ್ಯನನ್ನು ಬಂಧಿಸಿದ್ದರು.

ಬಂಧನ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಸಿದ ಷಡ್ಯಂತ್ರದಲ್ಲಿ ಈತ ಭಾಗಿಯಾಗಿರುವ ಕಾರಣ ಎಸ್‌ಐಟಿ ಪೊಲೀಸರು ವಶಕ್ಕೆ ಕೇಳಿದ್ದರು.

ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿದೆ.

Leave a Reply