ನನ್ನ ಸಿಡಿ ಕೇಸ್‌ನಲ್ಲಿ ಇದ್ದ ತಂಡವೇ ಸಂತೋಷ ಕೇಸ್‌ನಲ್ಲೂ ಇದೆ : ರಮೇಶ್ ಜಾರಕಿಹೊಳಿ – Vishwanews24

Featured, ರಾಜ್ಯ ನ್ಯೂಸ್

ಷಡ್ಯಂತ್ರಕ್ಕೆ ಸಿಲುಕಿ ನಾನು ಒಂದು ವರ್ಷದಿಂದ ನೋವು ಅನುಭವಿಸಿದ್ದೇನೆ..

ನನ್ನ ಸಿಡಿ ಪ್ರಕರಣ ಹಾಗೂ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನೂ ಸಿಬಿಐ ತನಿಖೆಗೆ ವಹಿಸಬೇಕು..

ಈಶ್ವರಪ್ಪ ತಪ್ಪು ಮಾಡಿದ್ದರೆ ಗಲ್ಲು ಶಿಕ್ಷೆಯಾಗಲಿ..

ಈಶ್ವರಪ್ಪ ಅವರು ತಪ್ಪು ಮಾಡಿದ್ದರೆ ಕೋರ್ಟ್ ಬೇಕಾದ ಶಿಕ್ಷೆ ಕೊಡಲಿ..

ಬೆಳಗಾವಿ: ನನ್ನ ಸಿಡಿ ಪ್ರಕರಣ ಹಾಗೂ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನೂ ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ.

ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಸಂತೋಷ್ ಮನೆಗೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕೇಸ್ ಹಿಂದೆಯೂ ‘ಮಹಾನಾಯಕ’ನ ತಂಡ ಕೆಲಸ ಮಾಡುತ್ತಿದೆ. ಹೆಸರು ಹೇಳುವುದು ಬೇಡ. ನನ್ನ ಸಿಡಿ ಕೇಸ್‌ನಲ್ಲಿ ಇದ್ದ ತಂಡವೇ ಸಂತೋಷ ಕೇಸ್‌ನಲ್ಲೂ ಇದೆ. ನನ್ನ ಸಿಡಿ ಕೇಸ್ ಮತ್ತು ಸಂತೋಷ್ ಕೇಸ್‌ನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಚಿವ ಕೆ.ಎಸ್.ಈಶ್ವರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬಾರದು. ಅವರು ತಪ್ಪು ಮಾಡಿದ್ದರೆ ಗಲ್ಲು ಶಿಕ್ಷೆಯಾಗಲಿ. ಷಡ್ಯಂತ್ರಕ್ಕೆ ಸಿಲುಕಿ ನಾನು ಒಂದು ವರ್ಷದಿಂದ ನೋವು ಅನುಭವಿಸಿದ್ದೇನೆ. ಈಶ್ವರಪ್ಪ ಅವರು ತಪ್ಪು ಮಾಡಿದ್ದರೆ ಕೋರ್ಟ್ ಬೇಕಾದ ಶಿಕ್ಷೆ ಕೊಡಲಿ ಎಂದು ಹೇಳಿದ್ದಾರೆ.

ಮಂಗಳೂರು : ಈಶ್ವರಪ್ಪ ರಾಜೀನಾಮೆ ಕೊಡದಿರೋದು ಬಿಜೆಪಿ ಮುಖವಾಡ ಬಯಲು ಮಾಡಿದೆ : ಯು.ಟಿ.ಖಾದರ್ – Vishwanews24

 

Leave a Reply