ನನ್ನ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ , ಬಿಜೆಪಿ ಗೆಲ್ಲಿಸಬೇಕು ಅನ್ನೋದಷ್ಟೇ ನನ್ನ ಮಾತಿನ ಉದ್ದೇಶ : ಅಶ್ವತ್ಥನಾರಾಯಣ – Vishwanews24

Featured, ರಾಜ್ಯ ನ್ಯೂಸ್

ಟಿಪ್ಪು ಹೊಡೆದಂತೆ ಸಿದ್ದರಾಮಯ್ಯಅವರನ್ನು ಹೊಡೆಯಬೇಕು ಎಂಬ ಹೇಳಿಕೆಗೆ ಸಚಿವ ಅಶ್ವತ್ಥನಾರಾಯಣ ಕ್ಷಮೆಯಾಚನೆ

ಬಿಜೆಪಿ ಗೆಲ್ಲಿಸಬೇಕು ಅನ್ನೋದಷ್ಟೇ ನನ್ನ ಮಾತಿನ ಉದ್ದೇಶ

ಬೆಂಗಳೂರು: ನನ್ನ ಹೇಳಿಕೆಯಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಂಗಳೂರು: ಟಿಪ್ಪು ಹೊಡೆದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆಯಬೇಕು ಎಂಬ ಹೇಳಿಕೆಗೆ ಸಚಿವ ಅಶ್ವತ್ಥ ನಾರಾಯಣ ವಿಷಾದ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಈ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗೆ ವೈಯಕ್ತಿಕವಾಗಿ ನೋವಾಗಿದ್ರೆ ವಿಷಾಧ ವ್ಯಕ್ತಪಡಿಸ್ತೇನೆ ಎಂದರು.

ಟಿಪ್ಪು ರೀತಿ ಸಿದ್ದರಾಮಯ್ಯ ಹತ್ಯೆ ಮಾಡಬೇಕು ಅನ್ನೋ ಬಗ್ಗೆ ಸ್ಪಷ್ಟನೆ ನೀಡಿದ ಅಶ್ವತ್ಥ್ ನಾರಾಯಣ್, ಮಂಡ್ಯದಲ್ಲಿ ಕಸಬಾ ಮಹಾಶಕ್ತಿ ಕೇಂದ್ರದ ಕಾರ್ಯರ್ತರ ಉದ್ದೇಶಿಸಿ ಮಾತನಾಡುವಾಗ ಮಾತನಾಡಿದೆ. ಟಿಪ್ಪು ಹೆಸರು ಉಲ್ಲೇಖ ಮಾಡಿದ್ದೆ.ಟಿಪ್ಪು ಜಯಂತಿಯನ್ನು ಕಾಂಗ್ರೆಸ್ ಮಾಡ್ತಿದೆ. ಅದನ್ನು ಖಂಡಿಸಬೇಕಿದೆ. ಈ ಬಗ್ಗೆ ಜನರಿಗೆ ನಾನು ಸ್ಪಷ್ಟವಾಗಿ ಹೇಳಿದ್ದೆ ಎಂದರು.

ಉಡುಪಿ: ನಗರಸಭೆ ಪೌರಾಯುಕ್ತ ಡಾ.ಉದಯ ಶೆಟ್ಟಿ ವರ್ಗಾವಣೆ – Vishwanews24

ಬರುವ ಚುನಾವಣೆಯಲ್ಲಿ ಜನರ ಬೆಂಬಲ ನಮ್ಮ ಪರವಾಗಿ ಪಡೆದುಕೊಳ್ಳಬೇಕು. ನಾವು ಪ್ರಜಾಪ್ರಭುತ್ವ ದಲ್ಲಿ ಇದ್ದೇವೆ, ಯುದ್ಧದ ಕಾಲದಲ್ಲಿ ಇಲ್ಲ. ಪ್ರಜಾಪ್ರಭುತ್ವದಲ್ಲಿ ನಾವು ಗೆಲ್ಲಬೇಕಿದೆ. ಆ ವಿಚಾರವಾಗಿ ಹೇಳಿದ್ದೇನೆ ಹೊರತು ಬೇರೆಯ ರೀತಿ ಅಲ್ಲ ಎಂದು ಸ್ಪಷ್ಟನೆ ನೀಡಿದರು.

ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ವಿರೋಧ ಮಾಡ್ತಿದ್ದೇನೆ ವಿನಹ ವೈಯಕ್ತಿಕವಾಗಿ ಅಲ್ಲ. ಗೆಲುವು ಸೋಲು ಚುನಾವಣೆಯಲ್ಲಿ ಇದೆ. ಓಲೈಕೆ ಮಾಡುವ ಪಕ್ಷವನ್ನು ಸೋಲಿಸಬೇಕು. ಬಿಜೆಪಿ ಗೆಲ್ಲಿಸಬೇಕು ಅನ್ನೋದಷ್ಟೇ ನನ್ನ ಮಾತಿನ ಉದ್ದೇಶವಾಗಿತ್ತು ಎಂದರು‌.

ಆದರೂ, ತನ್ನ ಹೇಳಿಕೆಯಿಂದ‌ ಸಿದ್ದರಾಮಯ್ಯ ಅವರಿಗೆ ವಯಕ್ತಿಕ ವಾಗಿ ನೋವಾಗಿದ್ರೆ ವಿಷಾದ ವ್ಯಕ್ತಪಡಿಸ್ತೇನೆ. ಇವರ ಹಾಗೆ ಸಿಎಂಗೆ ನಾಯಿ, ಪ್ರಧಾನಿಗೆ ನರಹಂತಕ ಎಂದು ಸಂಬೋಧಿಸಿ ಜಾತಿ, ಧರ್ಮ ಆಧಾರಿತವಾಗಿ ಸಮಾಜ ಒಡೆಯುವ ಕೆಲಸ ಮಾಡಿಲ್ಲ. ಇವರ ಹಾಗೆ ವೈಯಕ್ತಿಕವಾಗಿ ವಿರೋಧ ಮಾಡಿಲ್ಲ. ಚುನಾವಣೆಯಲ್ಲಿ ಗೆಲ್ಲಬೇಕೇ ವಿನಹ ಮತ್ತೆ ಬೇರೇನೂ ಅಲ್ಲ ಎಂದರು.

ಚಾಮರಾಜನಗರ : ಮಹಾಶಿವರಾತ್ರಿ ಹಿನ್ನೆಲೆ – ಫೆ.17ರಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ ನಿಷೇಧ – Vishwanews24

Leave a Reply