ನಮಗೆ ಅಯೋಧ್ಯೆ ಬೇಡ, ರೈತರ ಸಾಲಮನ್ನಾ ಮಾಡಿ : ರೈತರಿಂದ ಬೃಹತ್ ಪ್ರತಿಭಟನೆ
ನವದೆಹಲಿ: ಸ್ವಾಮಿನಾಥನ್ ವರದಿ ಜಾರಿ, ಪ್ರಧಾನ ಮಂತ್ರಿ ರಾಷ್ಟ್ರೀಯ ಫಸಲ್ ಬಿಮಾ (ಬೆಳೆ ವಿಮೆ) ಯೋಜನೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ರಾಷ್ಟ್ರದ ವಿವಿಧೆಡೆಯಿಂದ ಬಂದಿರುವ ರೈತರು ಇಲ್ಲಿನ ರಾಮಲೀಲಾ ಮೈದಾನದಲ್ಲಿ ಎರಡನೇ ದಿನವಾದ ಶುಕ್ರವಾರವೂ ಪ್ರತಿಭಟನೆ ಮುಂದುವರೆಸಿದ್ದಾರೆ. ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಸಾಲಮನ್ನಾ ಸೇರಿದಂತೆ ತಮ್ಮ ಹಲವು ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದಾರೆ. ತಲೆಬುರುಡೆ ಹಿಡಿದುಕೊಂಡು ಸರಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.
ನಮಗೆ ಅಯೋಧ್ಯೆ ಬೇಡ ರೈತರ ಸಾಲ ಮನ್ನಾ ಮಾಡಿ ಎಂದು ರೈತರು ಘೋಷಣೆಗಳನ್ನು ಕೂಗುತ್ತ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.
ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ, ಖರೀದಿ ಕೇಂದ್ರ ಸ್ಥಾಪನೆ, ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ರೈತರ ಸಾಲ ಮನ್ನಾ, ಮಿನಾಥನ್ ವರದಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ದೇಶದ ವಿವಿಧ ಭಾಗಗಳಿಂದ ಸಾವಿರಾರು ರೈತರು ಆಗಮಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆಂಧ್ರಪ್ರದೇಶ, ಗುಜರಾತ್, ಮಧ್ಯಪ್ರದೇಶ, ತಮಿಳುನಾಡು, ಮಹಾರಾಷ್ಟ್ರ, ಕರ್ನಾಟಕ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ರಾಜ್ಯಗಳು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ದೇಶದ ವಿವಿಧ ಭಾಗಗಳಿಂದ ದೆಹಲಿಗೆ ಬಂದು ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಮ್ಲೀಲಾ ಮೈದಾನದ ಸುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
