ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು :ಮುಲಾಯಂ ಸಿಂಗ್ – Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ರಾಜಕೀಯದಲ್ಲಿ ಯಾರೂ ಅಜನ್ಮ ಶತ್ರುಗಳಾಗಿ ಇರುವುದಿಲ್ಲ ಎಂಬುದಕ್ಕೆ ಬುಧವಾರ ಲೋಕಸಭೆಯ ಕಲಾಪದಲ್ಲಿ ನಡೆದ ಮುಲಾಯಂ ಸಿಂಗ್ ಯಾದವ್ ವ್ಯಕ್ತಪಡಿಸಿದ ಅಭಿಪ್ರಾಯ ಸಾಕ್ಷಿಯಾಯಿತು. 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂದು ಹೇಳಿದರು.

ಎಲ್ಲರನ್ನೂ ಜತೆಯಾಗಿಸಿ ಕೊಂಡುಹೋಗುವ ಮೋದಿ ನಾಯಕತ್ವ ಗುಣವನ್ನು ನಾನು ಅಭಿನಂದಿಸುತ್ತೇನೆ. ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ.ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಶುಭ ಕೋರುತ್ತೇನೆ.ಲೋಕಸಭೆಯ ಎಲ್ಲಾ ಸದಸ್ಯರು ಮತ್ತೆ ಆಯ್ಕೆಯಾಗಿ ಬರಲಿ ಎಂದು ಹಾರೈಸುತ್ತೇನೆ ಎಂದು ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಅವರು ಬಹಿರಂಗವಾಗಿ ತಮ್ಮ ಬೆಂಬಲವನ್ನು ಪ್ರಧಾನಿ ಮೋದಿ ಅವರಿಗೆ ನೀಡಿದ್ದಾರೆ.ಈ ಸಂದರ್ಭ ಎನ್ ಡಿ ಎ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದ್ರೆ ಇದಕ್ಕೆ ಪ್ರತಿಕ್ರಿಯಿಸಿದ ಮೋದಿ ಮುಲಾಯಂ ಹಾರೈಕೆಗೆ ಅಭಾರಿಯಾಗಿರುತ್ತೇನೆಂದರು.

ಮುಲಾಯಂ ಸಿಂಗ್ ಯಾದವ್ ಅವರು ಮಾತ್ರ ’2019ರಲ್ಲೂ ನರೇಂದ್ರ ಮೋದಿ ಅವರೇ ಪ್ರಧಾನಮಂತ್ರಿಯಾಗಲಿ, ಅಂತಹ ತಾಕತ್ತು ಇರುವುದು ಅವರೊಬ್ಬರಿಗೆ ‘ ಎಂದು ಸಂಸತ್ ಸದನದಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.