ನವರಾತ್ರಿ ಸಂಭ್ರಮ – ಕಟೀಲಿನಲ್ಲಿ ಸೆ.26ರಿಂದ ಬದಲಿ ರಸ್ತೆ ಸಂಚಾರ ; ತಾತ್ಕಾಲಿಕ ಮಾರ್ಪಾಡು : ಎನ್‌ ಶಶಿಕುಮಾರ್  – Vishwanews24

Featured, ದಕ್ಷಿಣ ಕನ್ನಡ

ನವರಾತ್ರಿ ಸಂಭ್ರಮ – ಕಟೀಲಿನಲ್ಲಿ ಸೆ.26ರಿಂದ ಬದಲಿ ರಸ್ತೆ ಸಂಚಾರ : ಎನ್‌ ಶಶಿಕುಮಾರ್ 

ಮಂಗಳೂರು: ದಸರಾ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಬದಲಿ ರಸ್ತೆ ಮಾರ್ಪಾಡು ಮಾಡಲಾಗುವುದು ಎಂದು ಆದೇಶಿಸಿ ಪೊಲೀಸ್ ಆಯುಕ್ತ ಎನ್‌ ಶಶಿಕುಮಾರ್ ಅವರು ಆದೇಶಿಸಿದ್ದಾರೆ.

ಇದೇ ಸೆ.26ರ ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 05ರ ರಾತ್ರಿ 11 ಗಂಟೆಯವರೆಗೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡಿ ಬದಲಿ ವ್ಯವಸ್ಥೆ ಸೂಚಿಸಿ ಆದೇಶಿಸಿದ್ದಾರೆ.

ಮಂಗಳೂರು- ಬಜಪೆ ಕಡೆಯಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆಯಂಗಡಿ ಕ್ರಾಸ್‍ನಿಂದ ಏಕಮುಖವಾಗಿ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು.

ಇದನ್ನೂ ಓದಿ: ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಕಟೀಲಿನಿಂದ ಮಂಗಳೂರು ಕಡೆಗೆ ಹೋಗುವ ಎಲ್ಲಾ ವಾಹನಗಳು ದೇವಸ್ಥಾನದ ಪದವಿ ಪೂರ್ವ ಕಾಲೇಜು ಮೈದಾನದ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ ಮಾರ್ಗವಾಗಿ ಮಂಗಳೂರು ಕಡೆಗೆ ಸಂಚರಿಸುವುದು.

ಉಲ್ಲಂಜೆ ರಸ್ತೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಮತ್ತು ಮಲ್ಲಿಗೆಯಂಗಡಿಯಿಂದ ಕಟೀಲು ಹಾಗೂ ಮಂಗಳೂರು ಕಡೆಗೆ ಹೋಗುವ ವಾಹನಗಳು ಮಲ್ಲಿಗೆಯಂಗಡಿ ಜಂಕ್ಷನ್‍ನಿಂದ ಗಿಡಿಗೆರೆ ರಸ್ತೆಗೆ ಏಕಮುಖವಾಗಿ ಚಲಿಸಿ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು.

ರಥಬೀದಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. (ವಾಹನ ಪೂಜೆಗೆ ಸಂಬಂಧಿಸಿದ ವಾಹನಗಳನ್ನು ಹೊರತುಪಡಿಸಿ) ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ- ಸೆ. 26ರಿಂದ ಅ. 5 ವರೆಗೆ ವೈಭವದ ಉಚ್ಚಿಲ ದಸರಾ-2022

Leave a Reply