ನವೀನ್‌ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರಿಂದ ಪೂಜೆ : ಸಾರ್ವಜನಿಕರ ದರ್ಶನಕ್ಕೆ ಅವಕಾಶ – Vishwanews24

Featured, ರಾಜ್ಯ ನ್ಯೂಸ್

ಗಣ್ಯರು, ಸಾರ್ವಜನಿಕರಿಂದ ಅಂತಿಮ ದರ್ಶನ..

ಎಸ್.ಎಸ್. ಮೆಡಿಕಲ್ ಕಾಲೇಜಿಗೆ ನವೀನ್ ದೇಹದಾನ..

ಹಾವೇರಿ : ಉಕ್ರೇನ್‌ನಲ್ಲಿ ರಷ್ಯಾ ಪಡೆಗಳು ನಡೆಸಿದ ಬಾಂಬ್‌ ದಾಳಿಯಲ್ಲಿ ಇದೇ 2ರಂದು ಮೃತಪಟ್ಟಿರುವ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ನವೀನ್‌ ಗ್ಯಾನಗೌಡರ ಅವರ ಮೃತದೇಹ 20 ದಿನಗಳ ಬಳಿಕ ಸ್ವಗ್ರಾಮ ರಾಣಿಬೆನ್ನೂರು ತಾಲೂಕು ಚಳಗೇರಿಗೆ ಆಗಮಿಸಿದ್ದು, ಕುಟುಂಬಸ್ಥರರಿಂದ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನವೀನ್‌ ಪಾರ್ಥಿವ ಶರೀರವನ್ನು ಚಳಗೇರಿಯ ನಿವಾಸಕ್ಕೆ ತಂದು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಪೂಜೆ ನೆರವೇರಿಸಲಾಗುತ್ತಿದ್ದು ಬಳಿಕ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತಿದೆ.

ಕುಟುಂಬಸ್ಥರ ಆಕ್ರಂದನ
ನವೀನ್ ಮೃತಪಟ್ಟು 21 ದಿನಗಳ ಬಳಿಕ ಪಾರ್ಥಿವ ಶರೀರ ಮನೆಗೆ ಆಗಮಿಸಿದ್ದು, ನವೀನ ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಗ್ರಾಮದಲ್ಲಿ ಶೋಕದ ವಾತಾವರಣ ಮಡುಕಟ್ಟಿದ್ದು, ಗ್ರಾಮಸ್ಥರೆಲ್ಲರು ನವೀನ ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದಾರೆ.

ದೇಹದಾನಕ್ಕೆ ನಿರ್ಧಾರ
ಅಂತಿಮ ದರ್ಶನದ ಬಳಿಕ ಚಳಗೇರಿ ಗ್ರಾಮದಲ್ಲಿ ನವೀನ್ ಮೆರವಣಿಗೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಇಡಿ ಗ್ರಾಮದಲ್ಲಿ ಮೆರವಣಿಗೆ ನಡೆಸಿ ಗೌರವ ಸಲ್ಲಿಸಲಾಗುತ್ತದೆ. ನವೀನ್ ದೇಹದಾನಕ್ಕೆ ಪೋಷಕರು ನಿರ್ಧರಿಸಿರುವಂತೆ ಮೆರವಣಿಗೆ ಬಳಿಕ ದಾವಣಗೆರೆಯ ಎಸ್.ಎಸ್. ಮೆಡಿಕಲ್ ಕಾಲೇಜಿಗೆ ನವೀನ್ ದೇಹವನ್ನು ಹಸ್ತಾಂತರ ಮಾಡಲಾಗುತ್ತಿದೆ.

ಪುತ್ತೂರು : ಕಾಲೇಜಿನ ಸಮವಸ್ತ್ರ ನಿಯಮಾವಳಿಗಳನ್ನು ಪಾಲಿಸಿ ತರಗತಿಗಳಿಗೆ ಹಾಜರಾಗಲು ಒಪ್ಪಿಗೆ ಸೂಚಿಸಿದ  ಮುಸ್ಲಿಂ ವಿದ್ಯಾರ್ಥಿನಿಯರು – Vishwanews24

Leave a Reply