ನಾನಿನ್ನೂ ರಾಜೀನಾಮೆ ಕೊಡುವ ಸನ್ನಿವೇಶ ಬಂದಿಲ್ಲ: ಎಚ್​ಡಿಕೆ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: 17 ಅತೃಪ್ತ ಶಾಸಕರು ರಾಜೀನಾಮೆ ನೀಡಿದ ಬಳಿಕ ಸಿಎಂ ಕುಮಾರಸ್ವಾಮಿ ರಾಜೀನಾಮೆ ಕೊಡಲಿ ಎಂದು ಬಿಜೆಪಿ ನಾಯಕರು ಆಗ್ರಹ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಅಧಿಕಾರ ಬಿಡಲು ಒಪ್ಪದ ಸಿಎಂ ಎಚ್​ಡಿಕೆ ನಾನ್ಯಾಕೆ ರಾಜೀನಾಮೆ ಕೊಡಲಿ ಎಂದು ಬಿಎಸ್​ವೈಗೆ ತಿರುಗೇಟು ನೀಡಿದ್ದಾರೆ.

ಮೈತ್ರಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2009-10ರಲ್ಲಿ ಇದೇ ಯಡಿಯೂರಪ್ಪ ಸಿಎಂ ಆಗಿದ್ದಾಗ 8 ಸಚಿವರು ಸೇರಿದಂತೆ 18 ಶಾಸಕರು ರಾಜೀನಾಮೆ ನೀಡಿದ್ದರು. ಆಗ ಏನಾಯ್ತು? ಈಗ ನಾನ್ಯಾಕೆ ರಾಜೀನಾಮೆ ನೀಡಲಿ?  ನಾನು ರಾಜೀನಾಮೆ ಕೊಡುವ ಅಗತ್ಯವೇ ಇಲ್ಲ. ನಾನಿನ್ನೂ ರಾಜೀನಾಮೆ ಕೊಡುವ ಸನ್ನಿವೇಶ ಬಂದಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ಕೊಡುವ ಅಗತ್ಯವಿಲ್ಲ. 2008, 2009 ರಲ್ಲಿ ಯಡಿಯೂರಪ್ಪ ರಾಜಿನಾಮೆ ಕೊಟ್ಟಿದ್ರಾ?  ಇದನ್ನು ಬಿಜೆಪಿಯವರು ನೆನಪಿಸಿಕೊಳ್ಳುವಂತೆ ಬಿಜೆಪಿಗೆ ತಿರುಗೇಟು ನೀಡಿದರು‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 2008,09 ರಲ್ಲಿ ಸಚಿವರಾಗಿದ್ದ 18 ಮಂದಿ ರಾಜೀನಾಮೆ ಕೊಟ್ಟಿದ್ದರು. ಆಗ ಯಡಿಯೂರಪ್ಪ ಅವರು ರಾಜಿನಾಮೆ ಕೊಟ್ಟಿದ್ರಾ ಎಂದು ಪ್ರಶ್ನಿಸಿದರು.