ನಾಳೆ ರಾಜ್ಯ ಮಟ್ಟದ ‘ಜನಸ್ಪಂದನಾ’ ಕಾರ್ಯಕ್ರಮ ; ಸಾರ್ವಜನಿಕರು ಭಾಗಿಯಾಗಿ ತಮ್ಮ ಅಹವಾಲು ಸಲ್ಲಿಸುವಂತೆ ಪ್ರಕಟಣೆ – Vishwanews24
ನಾಳೆ ರಾಜ್ಯ ಮಟ್ಟದ ‘ಜನಸ್ಪಂದನಾ’ ಕಾರ್ಯಕ್ರಮ ; ಸಾರ್ವಜನಿಕರು ಭಾಗಿಯಾಗಿ ತಮ್ಮ ಅಹವಾಲು ಸಲ್ಲಿಸುವಂತೆ ಪ್ರಕಟಣೆ
ಬೆಂಗಳೂರು(Vishwanews24): ನಾಳೆ ವಿಧಾನಸೌಧ ಮುಂಭಾಗ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಭಾಗಿಯಾಗಿ ತಮ್ಮ ಅಹವಾಲು ಸಲ್ಲಿಸುವಂತೆ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಅಹವಾಲು ಸಲ್ಲಿಕೆಗೆ ಆನ್ಲೈನ್ ಮೂಲಕ ನೋಂದಾಯಿಸಲು 1902 ಡಯಲ್ ಮಾಡಬಹುದಾಗಿದೆ. ವಿಧಾನಸೌಧ ಮುಂಭಾಗ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಜನಸ್ಪಂದನಕ್ಕೆ ಆಗಮಿಸುವವರಿಗೆ ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣದ ವರೆಗೆ ಹೋಗಲು ಮತ್ತು ಬರಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
12 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಹೇಮಾ ಮಾಲಿನಿ- ಧರ್ಮೇಂದ್ರ ಪುತ್ರಿ ಇಶಾ ಡಿಯೋಲ್ – Vishwanews24
ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಕಾಲದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ತರಬೇಕು ಎಂದು ಸೂಚನೆ ನೀಡಲಾಗಿದೆ.
ವೈದ್ಯಕೀಯ, ಕಂದಾಯ, ಪೊಲೀಸ್, ಪಹಣಿ, ಖಾತೆ, ಸರ್ವೆ, ಪೋಡಿ, ಅನ್ಯಾಯ ಹೀಗೆ ಯಾವುದೇ ವಿಚಾರಗಳಿರಲಿ, ತುರ್ತಾಗಿ ಸೂಕ್ತ ಪರಿಹಾರ ಸಿಗಲಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
