ನಾವು ಸಂಘಟನೆ ಮಾಡಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇವೆ : ಎಚ್.ಡಿ.ದೇವೇಗೌಡ -Vishwanews24
ಬೆಂಗಳೂರು:ರಾಜ್ಯದಲ್ಲಿ ಉಪಚುನಾವಣೆ ಬರುತ್ತೋ ಅಥವಾ ಮಧ್ಯಂತರ ಚುನಾವಣೆಯೇ ಬರುತ್ತೋ , ಬರುವುದಿಲ್ಲವೋ ಗೊತ್ತಿಲ್ಲ. ಆದರೆ ನಾವು ಸಂಘಟನೆ ಮಾಡಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ವಿಚಾರ ಸುಪ್ರೀಂಕೋರ್ಟ್ನಲ್ಲಿದ್ದು ಏನಾಗುತ್ತೋ ಗೊತ್ತಿಲ್ಲ. ಆದರೆ ಪಕ್ಷ ಬಲಪಡಿಸುವ ಕೆಲಸವನ್ನು ನಾವು ಮಾಡಬೇಕಿದೆ.
ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿಯಿಂದ ಸಂಕಷ್ಟ ಉಂಟಾಗಿದೆ. ರಾಜ್ಯದಲ್ಲೂ ಅನೇಕ ಸಾವುನೋವುಗಳು ಸಂಭವಿಸಿದೆ.ಮುಖ್ಯಮಂತ್ರಿ ಯಡಿಯೂರಪ್ಪನವರ ನಿಯೋಗ ಹೋಗಿ ಕೇಂದ್ರ ಸರ್ಕಾರದಿಂದ ಅನುದಾನ ತರುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಯವರ ಸಾಮಥ್ರ್ಯದ ಬಗ್ಗೆ ಪ್ರಶ್ನೆ ಮಾಡುವುದಿಲ್ಲ ಎಂದರು.
ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಆರ್ಬಿಐನಿಂದ ಇದೇ ಮೊದಲ ಬಾರಿಗೆ ಭಾರೀ ಪ್ರಮಾಣದಲ್ಲಿ ಹಣವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಹಿಂದೆಂದೂ ಇಷ್ಟೊಂದು ಪ್ರಮಾಣದಲ್ಲಿ ತೆಗೆದುಕೊಂಡಿರಲಿಲ್ಲ. ಆರ್ಬಿಐ ಗೌರ್ನರ್ಗಳು ಹೇಳಿಕೆಗಳನ್ನು ಗಮನಿಸಿದ್ದೇನೆ. ವಿದೇಶಿ ಹೂಡಿಕೆ ಬಂದಿದೆ ಎಂದು ಹೇಳುತ್ತಿದ್ದಾರೆ.
