ನಿಂತಿದ್ದ ಲಾರಿಗೆ ಅಂಬುಲೆನ್ಸ್ ಢಿಕ್ಕಿ: ನಾಲ್ವರ ದಾರುಣ ಸಾವು
ಬೆಂಗಳೂರು: ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿ ಆನೇಕಲ್ಗೆ ಹೊಂದಿಕೊಂಡಿರುವ ಹೊಸೂರಿನಲ್ಲಿ ನಡೆದಿದೆ.
ಆ್ಯಂಬುಲೆನ್ಸ್ ತಿರುಚ್ಚಿಯಿಂದ ಬೆಂಗಳೂರಿನತ್ತ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮುಂಜಾನೆ 3:30 ಸುಮಾರಿಗೆ ಘಟನೆ ನಡೆದಿದ್ದು, .ಅಂಬುಲೆನ್ಸ್ ಚಾಲಕ ಜಯ ಸೂರ್ಯ ಮತ್ತು ರೋಗಿ ಮದನ್ ಮೃತ ದುರ್ದೈವಿಗಳು. ಮತ್ತಿಬ್ಬರ ಹೆಸರು ತಿಳಿದು ಬಂದಿಲ್ಲ. ಹೊಸೂರು ಸಮೀಪದ ಸೀತಾರಾಮ್ ಮೆದು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಈ ಅಪಘಾತ ಸಂಭವಿಸಿದೆ.

ತಿರುಚ್ಚಿಯಿಂದ ಹೆಚ್ 1 ಎನ್1 ಜ್ವರದಿಂದ ಬಳಲುತ್ತಿದ್ದ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿಸೇಲ್ ಖಾಲಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆ್ಯಂಬುಲೆನ್ಸ್ನಲ್ಲಿದ್ದ ನಾಲ್ವರೂ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹೊಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
