ನೆರೆಯ ರಾಷ್ಟ್ರಗಳು ಅತಿಕ್ರಮಣ ಮಾಡಿಕೊಂಡಿರುವ ಭಾರತದ ಭೂ ಭಾಗವನ್ನು ವಾಪಸ್‌ ಪಡೆಯುತ್ತೇವೆ: ಮೋಹನ್‌ ಭಾಗವತ್‌ – Vishwanews24

Featured, ರಾಜ್ಯ ನ್ಯೂಸ್

ನೆರೆಯ ರಾಷ್ಟ್ರಗಳು ಅತಿಕ್ರಮಣ ಮಾಡಿಕೊಂಡಿರುವ ಭಾರತದ ಭೂ ಭಾಗವನ್ನು ವಾಪಸ್‌ ಪಡೆಯುತ್ತೇವೆ: ಮೋಹನ್‌ ಭಾಗವತ್‌ – Vishwanews24

ಕಲಬುರಗಿ: ನೆರೆಯ ರಾಷ್ಟ್ರಗಳು ಅತಿಕ್ರಮಣ ಮಾಡಿಕೊಂಡಿರುವ ಭಾರತದ ಭೂ ಭಾಗವನ್ನು ವಾಪಸ್‌ ಪಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌)ದ ಪ್ರಯತ್ನ ನಿರಂತರವಾಗಿರುತ್ತದೆ ಎಂದು ಆರ್‌ ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಘಟನೆ ಬಲಗೊಳಿಸುವ ನಿಟ್ಟಿನಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಅವರು, ಬುಧವಾರ ನಗರದಲ್ಲಿ ವಿವಿಧ ಕ್ಷೇತ್ರಗಳ ಪ್ರಮುಖರೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಪಾಕಿಸ್ತಾನ, ಚೀನಾ ಹಾಗೂ ಬಾಂಗ್ಲಾದೇಶದ ಗಡಿ ಭಾಗದಲ್ಲಿ ದೇಶದ ಭೂಮಿ ಅತಿಕ್ರಮಣವಾಗಿದೆ. ಅದನ್ನು ಪಡೆದೇ ಪಡೆಯುತ್ತೇವೆ. ಸಂಬಂಧಿಸಿದವರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಾರೆ. ಸಂಘವು ದೇಶದ ಭೂಮಿ ವಾಪಸ್‌ ಪಡೆಯುವಂತೆ ಮಾಡಲಿದೆ ಎಂದು ಪುನರುಚ್ಚರಿಸಿದರು.

ಸಂವಾದದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಪಾಲ್ಗೊಂಡಿದ್ದರು. ಆರ್‌ ಎಸ್‌ಎಸ್‌ ಪ್ರಾಂತ ಸಂಚಾಲಕ ಖಗೇಶನ ಪಟ್ಟಣಶೆಟ್ಟಿ, ಪ್ರಮುಖರಾದ ಎಂ. ನಾಗರಾಜ, ಅರವಿಂದ ದೇಶ ಪಾಂಡೆ, ಅಶೋಕ, ಸಚಿವ ಮುರುಗೇಶ ನಿರಾಣಿ, ಶಾಸಕರಾದ ದತ್ತಾತ್ರೇಯ ಪಾಟೀಲ, ಬಸವರಾಜ ಮತ್ತಿಮಡು, ಬಿ.ಜಿ.ಪಾಟೀಲ, ಶಶೀಲ್‌ ನಮೋಶಿ, ರಘುನಾಥ ಮಲ್ಕಾಪುರೆ ಮುಂತಾದವರಿದ್ದರು. ಮೋಹನ್‌ ಭಾಗವತ್‌ ಅವರು ಗುರುವಾರ “ಸಂಕ್ರಾಂತಿ ಉತ್ಸವ’ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಜನರ ದೃಷ್ಟಿಯಿಂದ ಪಾದಯಾತ್ರೆ ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ , ಮೇಕೆದಾಟು ಯೋಜನೆ ಪರ ನಮ್ಮ ಹೋರಾಟ ಈಡೇರುವವರೆಗೆ ಮುಂದುವರಿಯುತ್ತದೆ : ಡಿ ಕೆ ಶಿ – VIshwanews24

Leave a Reply