ಉಡುಪಿ ಸಮೀಪದ ನೇಜಾರು ತೃಪ್ತಿ ಲೇ ಔಟ್ ನ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದಿರುವ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರವಿರಾಜ್ ರಾವ್ ಆಗ್ರಹಿಸಿದ್ದಾರೆ.
ಹಾಡಹಗಲೇ ಅಪರಿಚಿತ ವ್ಯಕ್ತಿಯೋರ್ವ ಮನೆಗೆ ನುಗ್ಗಿ ತಾಯಿ ಮತ್ತು ಮಕ್ಕಳನ್ನು ಬೀಭತ್ಸವಾಗಿ ಕೊಚ್ಚಿ ಕೊಲೆ ಮಾಡಿ ತೆರಳಿರುವುದು ಉಡುಪಿ ಜಿಲ್ಲೆಯನ್ನು ಬೆಚ್ಚಿ ಬೀಳಿಸುವಂತಾಗಿದೆ. ಇಡೀ ಕುಟುಂಬವನ್ನು ಭೀಕರವಾಗಿ ಕೊಲೆ ಮಾಡಿ ಸರ್ವ ನಾಶ ಮಾಡಿರುವುದು ಸ್ಥಳೀಯ ನಿವಾಸಿಗಳಲ್ಲಿ ಅತಂಕ ಮತ್ತು ಅಭದ್ರತೆ ಮೂಡಲ ಕಾರಣವಾಗಿದೆ. ಜಿಲ್ಲೆಯಲ್ಲಿ ನಡೆದಿರುವ ಒಂದೇ ಕುಟುಂಬದ ನಾಲ್ವರ ಹತ್ಯೆ ಅತ್ಯಂತ ಅಮಾನುಷ ಕೃತ್ಯವಾಗಿದ್ದು ತೀವ್ರ ಖಂಡನೀಯವಾಗಿದೆ.
ನೇಜಾರಿನಲ್ಲಿ ನಡೆದಿರುವ ಘಟನೆಯಿಂದ ಮಹಿಳೆಯರು ಮತ್ತು ಮಕ್ಕಳು ಏಕಾಂಗಿಯಾಗಿ ಮನೆಯಲ್ಲಿ ವಾಸಿಸಲು ಭಯಪಡುವ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ದಕ್ಷ ಪೊಲೀಸ್ ವರಿಷ್ಠಾಧಿಕಾರಿಯಿಂದ ಕೊಲೆಯ ಸಂಚನ್ನು ಭೇಧಿಸಿ ಆರೋಪಿಯನ್ನು ಕೂಡಲೇ ಬಂಧಿಸಭೇಕು. ನಗರದೆಲ್ಲೆಡೆ ಸಿಸಿ ಟಿವಿ ಕ್ಯಾಮಾರಾಗಳಿದ್ದರೂ ಕೂಡ ಯಾವುದೂ ಕಾರ್ಯಾಚರಿಸುತ್ತಿಲ್ಲ. ಇದರ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಗಮನಹರಿಸಿ ನಾಗರಿಕರ ರಕ್ಷಣೆಯನ್ನು ಮಾಡಬೇಕಾಗಿದೆ.
ಪೊಲೀಸ್ ಇಲಾಖೆ ತಾಯಿ ಮತ್ತು ಮಕ್ಕಳ ಕೊಲೆಗಾರನನ್ನು ಹಿಡಿದು ಕೊಲೆಗೆ ನೈಜ ಕಾರಣವನ್ನು ಕಂಡು ಹುಡುಕುವುದರ ಮೂಲಕ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುವಂತೆ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…